2:02 PM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

28/04/2024, 22:47

ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ. ಕಳೆದ ಬಾರಿ ಬಿಜೆಪಿ ಟಿಕೆಟ್ ಸಿಗದಕ್ಕೆ ಕಾಂಗ್ರೆಸ್‌ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಕೆಟ್ಟದಾಗಿ ಸೋತರು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೀಗ ಬೆಳಗಾವಿಯಲ್ಲಿ ಮಂಗಲಾ‌ ಅಂಗಡಿ ಬದಲಿಗೆ ಶೆಟ್ಟರ್ ಅವರನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ 12, ದೇಶಾದ್ಯಂತ 100 ಹಾಲಿ ಎಂಪಿಗಳಿಗೆ ಬಿಜೆಪಿ ಕೊಟ್ಟಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ಗೆಲ್ಲದ ಶೆಟ್ಟರ್ ಇಲ್ಲಿ ನಿಜವಾಗಿಯೂ ಗೆಲ್ತಾರಾ? ಎಂದು ಮುಖ್ಯಮಂತ್ರಿ ವ್ಯಂಗ್ಯವಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು. ಈ ಬಾರಿ ಅವರ ಮಗನನ್ನು ಆರಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಕಳೆದ ಚುನಾವಣೆಯಲ್ಲಿ ಕರ್ನಾಟಕದಿಂದ 25 ಜನ ಬಿಜೆಪಿಯಿಂದ ಗೆದ್ದಿದ್ದರು. ಸುರೇಶ್ ಅಂಗಡಿ‌ ಮಂತ್ರಿ ಆಗಿದ್ರು, ಬಳಿಕ ಅವರ ಪತ್ನಿ ಕೂಡ ಗೆದ್ದಿದ್ದರು. ಬಿಜೆಪಿಯ 25 ಜನ ಎಂಪಿಗಳು ಮಾತಾಡಿಲ್ಲ. ಹೀಗಿರುವಾಗ, ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದೆಯಾ? ಮೋದಿ ಕಂಡ್ರೆ ಅವ್ರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು