5:35 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

28/04/2024, 22:47

ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ. ಕಳೆದ ಬಾರಿ ಬಿಜೆಪಿ ಟಿಕೆಟ್ ಸಿಗದಕ್ಕೆ ಕಾಂಗ್ರೆಸ್‌ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಕೆಟ್ಟದಾಗಿ ಸೋತರು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೀಗ ಬೆಳಗಾವಿಯಲ್ಲಿ ಮಂಗಲಾ‌ ಅಂಗಡಿ ಬದಲಿಗೆ ಶೆಟ್ಟರ್ ಅವರನ್ನು ನಿಲ್ಲಿಸಲಾಗಿದೆ. ಕರ್ನಾಟಕದಲ್ಲಿ 12, ದೇಶಾದ್ಯಂತ 100 ಹಾಲಿ ಎಂಪಿಗಳಿಗೆ ಬಿಜೆಪಿ ಕೊಟ್ಟಿಲ್ಲ. ಇನ್ನು ಹುಬ್ಬಳ್ಳಿಯಲ್ಲಿ ಗೆಲ್ಲದ ಶೆಟ್ಟರ್ ಇಲ್ಲಿ ನಿಜವಾಗಿಯೂ ಗೆಲ್ತಾರಾ? ಎಂದು ಮುಖ್ಯಮಂತ್ರಿ ವ್ಯಂಗ್ಯವಾಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. 2014 ರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಲೋಕಸಭೆಗೆ ನಿಂತು ಸ್ವಲ್ಪ ಮತಗಳಿಂದ ಸೋತಿದ್ದರು. ಈ ಬಾರಿ ಅವರ ಮಗನನ್ನು ಆರಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಕಳೆದ ಚುನಾವಣೆಯಲ್ಲಿ ಕರ್ನಾಟಕದಿಂದ 25 ಜನ ಬಿಜೆಪಿಯಿಂದ ಗೆದ್ದಿದ್ದರು. ಸುರೇಶ್ ಅಂಗಡಿ‌ ಮಂತ್ರಿ ಆಗಿದ್ರು, ಬಳಿಕ ಅವರ ಪತ್ನಿ ಕೂಡ ಗೆದ್ದಿದ್ದರು. ಬಿಜೆಪಿಯ 25 ಜನ ಎಂಪಿಗಳು ಮಾತಾಡಿಲ್ಲ. ಹೀಗಿರುವಾಗ, ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದೆಯಾ? ಮೋದಿ ಕಂಡ್ರೆ ಅವ್ರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು