2:13 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಶೆಟ್ಟರ್ ಕಚೇರಿಯಲ್ಲಿ ಈಗಲೂ ಇದೆ ಮೋದಿ, ಶಾ ಫೋಟೋ!: ಮುಂದಕ್ಕೂ ತೆಗಿಯೋಲ್ಲವಂತೆ!

04/05/2023, 11:16

ಮೈಥಿಲಿ ಎ. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗಿನ 40 ವರ್ಷಗಳ ಕರುಳುಬಳ್ಳಿ ಸಂಬಂಧವನ್ನು ಕಡಿದು ಕಾಂಗ್ರೆಸ್ ಪಕ್ಷ ಸೇರಿರುವುದು ಈಗ ಹಳೆಯ ವಿಚಾರ. ಹೊಸ ವಿಚಾರವೇನೆಂದರೆ ಶೆಟ್ಟರ್ ಕಚೇರಿಯಲ್ಲಿ ಈಗಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಫೋಟೋ ರಾರಾಜಿಸುತ್ತಿದೆ.

ತಾನು ಕಾಂಗ್ರೆಸ್ ಸೇರಿದರೂ ಮೋದಿ ಹಾಗೂ ಶಾ ಅವರ ಫೋಟೋ ಮುಂದಕ್ಕೂ ಇರುತ್ತೆ. ನಾನು ಅದನ್ನು ಬದಲಾಯಿಸೊಲ್ಲ ಎಂದು ಶೆಟ್ಟರ್ ಅವರು ರಿಪೋರ್ಟರ್ ಕರ್ನಾಟಕಕ್ಕೆ ಖಡಾಖಂಡಿತವಾಗಿ ತಿಳಿಸಿದ್ದಾರೆ‌‌.
ಶೆಟ್ಟರ್ ಅವರಿಗೆ ಪ್ರಧಾನಿ ಮೋದಿ ಹಾಗೂ ಶಾ ಅವರ ಮೇಲೆ ಈಗಲೂ ಅಪಾರ ಗೌರವವಿದೆಯಂತೆ. ಪಕ್ಷ ಬದಲಾಯಿಸಿದ ಮಾತ್ರಕ್ಕೆ ಮೋದಿ ಮತ್ತು ಶಾ ಅವರ ಫೋಟೋ ಬದಲಾಯಿಸಬೇಕಿಲ್ಲ. ನಾನು ಅಧಿಕಾರದ ಆಸೆಯಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಲ್ಲ. ಸ್ವಾಭಿಮಾನದ ಪ್ರಶ್ನೆ ಎದುರಾದಾಗ ಆತ್ಮಾಭಿಮಾನ ಉಳಿಸಿಕೊಳ್ಳಲು ನಾನು ಪಕ್ಷ ಬದಲಾಯಿಸುವ ಅನಿವಾರ್ಯತೆ ಉಂಟಾಯಿತು ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು