6:55 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಶೆಟ್ಟರ್ ಕಚೇರಿಯಲ್ಲಿ ಈಗಲೂ ಇದೆ ಮೋದಿ, ಶಾ ಫೋಟೋ!: ಮುಂದಕ್ಕೂ ತೆಗಿಯೋಲ್ಲವಂತೆ!

04/05/2023, 11:16

ಮೈಥಿಲಿ ಎ. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗಿನ 40 ವರ್ಷಗಳ ಕರುಳುಬಳ್ಳಿ ಸಂಬಂಧವನ್ನು ಕಡಿದು ಕಾಂಗ್ರೆಸ್ ಪಕ್ಷ ಸೇರಿರುವುದು ಈಗ ಹಳೆಯ ವಿಚಾರ. ಹೊಸ ವಿಚಾರವೇನೆಂದರೆ ಶೆಟ್ಟರ್ ಕಚೇರಿಯಲ್ಲಿ ಈಗಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಫೋಟೋ ರಾರಾಜಿಸುತ್ತಿದೆ.

ತಾನು ಕಾಂಗ್ರೆಸ್ ಸೇರಿದರೂ ಮೋದಿ ಹಾಗೂ ಶಾ ಅವರ ಫೋಟೋ ಮುಂದಕ್ಕೂ ಇರುತ್ತೆ. ನಾನು ಅದನ್ನು ಬದಲಾಯಿಸೊಲ್ಲ ಎಂದು ಶೆಟ್ಟರ್ ಅವರು ರಿಪೋರ್ಟರ್ ಕರ್ನಾಟಕಕ್ಕೆ ಖಡಾಖಂಡಿತವಾಗಿ ತಿಳಿಸಿದ್ದಾರೆ‌‌.
ಶೆಟ್ಟರ್ ಅವರಿಗೆ ಪ್ರಧಾನಿ ಮೋದಿ ಹಾಗೂ ಶಾ ಅವರ ಮೇಲೆ ಈಗಲೂ ಅಪಾರ ಗೌರವವಿದೆಯಂತೆ. ಪಕ್ಷ ಬದಲಾಯಿಸಿದ ಮಾತ್ರಕ್ಕೆ ಮೋದಿ ಮತ್ತು ಶಾ ಅವರ ಫೋಟೋ ಬದಲಾಯಿಸಬೇಕಿಲ್ಲ. ನಾನು ಅಧಿಕಾರದ ಆಸೆಯಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಲ್ಲ. ಸ್ವಾಭಿಮಾನದ ಪ್ರಶ್ನೆ ಎದುರಾದಾಗ ಆತ್ಮಾಭಿಮಾನ ಉಳಿಸಿಕೊಳ್ಳಲು ನಾನು ಪಕ್ಷ ಬದಲಾಯಿಸುವ ಅನಿವಾರ್ಯತೆ ಉಂಟಾಯಿತು ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು