2:33 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶೆಟ್ಟರ್ ಕಚೇರಿಯಲ್ಲಿ ಈಗಲೂ ಇದೆ ಮೋದಿ, ಶಾ ಫೋಟೋ!: ಮುಂದಕ್ಕೂ ತೆಗಿಯೋಲ್ಲವಂತೆ!

04/05/2023, 11:16

ಮೈಥಿಲಿ ಎ. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗಿನ 40 ವರ್ಷಗಳ ಕರುಳುಬಳ್ಳಿ ಸಂಬಂಧವನ್ನು ಕಡಿದು ಕಾಂಗ್ರೆಸ್ ಪಕ್ಷ ಸೇರಿರುವುದು ಈಗ ಹಳೆಯ ವಿಚಾರ. ಹೊಸ ವಿಚಾರವೇನೆಂದರೆ ಶೆಟ್ಟರ್ ಕಚೇರಿಯಲ್ಲಿ ಈಗಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಫೋಟೋ ರಾರಾಜಿಸುತ್ತಿದೆ.

ತಾನು ಕಾಂಗ್ರೆಸ್ ಸೇರಿದರೂ ಮೋದಿ ಹಾಗೂ ಶಾ ಅವರ ಫೋಟೋ ಮುಂದಕ್ಕೂ ಇರುತ್ತೆ. ನಾನು ಅದನ್ನು ಬದಲಾಯಿಸೊಲ್ಲ ಎಂದು ಶೆಟ್ಟರ್ ಅವರು ರಿಪೋರ್ಟರ್ ಕರ್ನಾಟಕಕ್ಕೆ ಖಡಾಖಂಡಿತವಾಗಿ ತಿಳಿಸಿದ್ದಾರೆ‌‌.
ಶೆಟ್ಟರ್ ಅವರಿಗೆ ಪ್ರಧಾನಿ ಮೋದಿ ಹಾಗೂ ಶಾ ಅವರ ಮೇಲೆ ಈಗಲೂ ಅಪಾರ ಗೌರವವಿದೆಯಂತೆ. ಪಕ್ಷ ಬದಲಾಯಿಸಿದ ಮಾತ್ರಕ್ಕೆ ಮೋದಿ ಮತ್ತು ಶಾ ಅವರ ಫೋಟೋ ಬದಲಾಯಿಸಬೇಕಿಲ್ಲ. ನಾನು ಅಧಿಕಾರದ ಆಸೆಯಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಲ್ಲ. ಸ್ವಾಭಿಮಾನದ ಪ್ರಶ್ನೆ ಎದುರಾದಾಗ ಆತ್ಮಾಭಿಮಾನ ಉಳಿಸಿಕೊಳ್ಳಲು ನಾನು ಪಕ್ಷ ಬದಲಾಯಿಸುವ ಅನಿವಾರ್ಯತೆ ಉಂಟಾಯಿತು ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು