5:09 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ

06/02/2026, 21:22

ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ. ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ 2019ರ ಅನ್ವಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ಕೆ.ಇ. ಕೇಶವ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಿಎಸ್‌ಐ ಎಚ್.ಶರತ್, ಸಿಬ್ಬಂದಿಯಾದ ಕೊಟ್ರೇಶಪ್ಪ, ಕೆ.ಪ್ರದೀಪ್, ನಾಗರಾಜ, ರವಿ ನಾಯ್ಕ, ರವಿಕುಮಾರ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು