9:57 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ

06/02/2026, 21:22

ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ. ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ 2019ರ ಅನ್ವಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ಕೆ.ಇ. ಕೇಶವ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಿಎಸ್‌ಐ ಎಚ್.ಶರತ್, ಸಿಬ್ಬಂದಿಯಾದ ಕೊಟ್ರೇಶಪ್ಪ, ಕೆ.ಪ್ರದೀಪ್, ನಾಗರಾಜ, ರವಿ ನಾಯ್ಕ, ರವಿಕುಮಾರ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು