10:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಿಕಾರಿಪುರ ಬಳಿ ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ವ್ಯಕ್ತಿ ದುರ್ಮರಣ

23/09/2024, 22:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಬಂದು ಗುದ್ದಿದ ಪರಿಣಾಮ ರಸ್ತೆಯಲ್ಲಿ
ಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಶಿಕಾರಿಪುರದಲ್ಲಿ
ಇಂದು ಸಂಜೆ ನಡೆದಿದೆ.
ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 )ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ
ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ ಬದಲಾವಣೆ ಮಾಡುತ್ತಿರುವಾಗ ಶಿಕಾರಿಪುರದಿಂದ ಹೊನ್ನಳ್ಳಿ ಹೋಗುವ KA 01 EB 4020 ಸಂಖ್ಯೆಯ ಬಜಾಜ್ ಸಿಟಿ 100 ಬೈಕ್ ಸವಾರ ಬಸವರಾಜ್ ಗುದ್ದಿದ ಪರಿಣಾಮವಾಗಿ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ತೀರ್ಥಹಳ್ಳಿಯಿಂದ ಕೆಲಸದ ಮೇಲೆ KA 14 B 0842 ಸಂಖ್ಯೆಯ ಲಾರಿಯನ್ನು ತೆಗೆದುಕೊಂಡು ರಮೇಶ್ ಶಿಕಾರಿಪುರಕ್ಕೆ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು