8:29 AM Tuesday24 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಶಿಕ್ಷಕರ ದಿನಾಚರಣೆ: ಅಮ್ಯೂಸ್‌ಮೆಂಟ್ ಪಾರ್ಕ್‌ ವಂಡ‌ರ್ ಲಾದಿಂದ ಗುರುಗಳಿಗೆ ಉಚಿತ ಪ್ರವೇಶ

26/08/2022, 20:40

ಬೆಂಗಳೂರು(reporterkarnataka.com): ದೇಶದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್‌ ವಂಡ‌ರ್ ಲಾ ಹಾಲಿಡೇಸ್ ಲಿಮಿಟೆಡ್ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರರಿಗೆ ಉಚಿತ ಪ್ರವೇಶ ನೀಡಿದೆ. 

ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್ ಪಾರ್ಕ್‌ಗಳಲ್ಲಿ ಸೆಪ್ಟೆಂಬರ್ 3 ರಿಂದ ಸೆಪ್ಟೆಂಬರ್ 5ವರೆಗೆ ಉಚಿತ ಪ್ರವೇಶ ಇರಲಿದೆ. ಇದರ ಬಗ್ಗೆ 

ಮಾತನಾಡಿದ ವಂಡರ್ ಲಾ ಹಾಲಿ ಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ ಚಿಟ್ಟಿಲಪಿಲ್ಲಿ ಸಾಂಕ್ರಾಮಿಕ ರೋಗದ ಉದ್ದಕ್ಕೂ ಶಿಕ್ಷಕರು ಆನ್‌ಲೈನ್ ತರಗತಿ ಹೆಸರಿನಲ್ಲಿ ಮನೆ ಹಾಗೂ ಶಾಲೆ ಎರಡೂ ಸೇವೆ ಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಜೀವನದ ಪಾಠ ಕಲಿಸುವ

ಈ ಮಾರ್ಗದರ್ಶಕರನ್ನು ವಂಡರ್‌ ಲಾ ಗೌರವಿಸುವ ಉದ್ದೇಶದಿಂದ ಈ ಕೊಡುಗೆ ನೀಡುತ್ತಿದೆ. ಇದಷ್ಟೇ ಅಲ್ಲದೆ, ಆಗಸ್ಟ್ 29 ರಿಂದ ಸೆಪ್ಟೆಂಬರ್ 5 ರ ಅವಧಿಯಲ್ಲಿ ವಂಡರ್‌ ಲಾ ಪಾರ್ಕ್‌ಗೆ ಭೇಟಿ ನೀಡುವ ಎಲ್ಲಾ ಶಿಕ್ಷಕರಿಗೂ ತಮ್ಮ ಬುಕಿಂಗ್‌ಗಳ ಮೇಲೆ ಶೇ. 20 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.ಈ ಕೊಡುಗೆ ಯನ್ನು ಪಡೆಯಲು ಕಡ್ಡಾಯವಾಗಿ ಗುರುತಿನ ಚೀಟಿ ಕೊಂಡೊಯ್ಯಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು