9:44 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು