1:25 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು