10:04 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು