3:23 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ ಅಗತ್ಯ: ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಹರೀಶ್ ಆಚಾರ್ಯ

30/05/2024, 20:26

ಮಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರವಾಗಿದೆ. ಸಮಸ್ಯೆ ಪರಿಹಾರಕ್ಕೆ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿಗೊಳ್ಳುವ ಅಗತ್ಯ ಇದೆ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್ ಹರೀಶ್ ಆಚಾರ್ಯ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಶಿಕ್ಷಕ ಸಮುದಾಯದ ಸಮಸ್ಯೆಗಳು ಮುಗಿಯದ ಗೋಳಾಗಿದೆ. ಈ ಸಮಸ್ಯೆಗಳು ಮುಗಿಯುವ ಬದಲಾಗಿ ದಿನೇದಿನೆ ಜಟಿಲಗೊಳ್ಳುತ್ತಿದೆ. ಇದಕ್ಕೆ ಪರಿಹಾರ ಒದಗಿಸುವುದು ನನ್ನ ಸ್ಪರ್ಧೆಯ ಉದ್ದೇಶ ಎಂದರು.
ರಾಜ್ಯದ ಪ್ರಸ್ತುತ ಕರ್ನಾಟಕ ನಾಗರಿಕ ಸೇವಾ ಅಧಿ ನಿಯಮ ಇದು ಶಿಕ್ಷಕರ ಸಮಸ್ಯೆಗಳನ್ನು ಎದುರಿಸುವಲ್ಲಿ ಅತ್ಯಂತ ದುರ್ಬಲವಾಗಿದೆ. ಆದುದರಿಂದ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿಗೊಳ್ಳುವ ಅಗತ್ಯ ಇದೆ ಎಂದು ಅವರು ನುಡಿದರು.
ಖಾಸಗಿ ಶಾಲಾ -ಕಾಲೇಜು/ ಸರಕಾರಿ ಶಾಲಾ-ಕಾಲೇಜು/ ಅನುದಾನಿತ ಶಾಲಾ -ಕಾಲೇಜು ಶಿಕ್ಷಕರ ಸಮಸ್ಯೆಗಳು, ದೈಹಿಕ ಶಿಕ್ಷಣ ಹಾಗೂ ಕಲಾ ಮತ್ತು ಕಸೂತಿ ಶಿಕ್ಷಕರ ಸಮಸ್ಯೆಗಳು, ವಸತಿ ಶಾಲಾ ಶಿಕ್ಷಕರ ಸಮಸ್ಯೆಗಳು, ಭಡ್ತಿ ಹೊಂದಿದ ಶಿಕ್ಷಕರ ಸಮಸ್ಯೆಗಳು, ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರ ಸಮಸ್ಯೆಗಳು, ಪಿಂಚಣಿಯ ಸಮಸ್ಯೆ, ಭರ್ತಿಯಾಗದೆ ಖಾಲಿ ಇರುವ ಶಿಕ್ಷಕ ಹುದ್ದೆಗಳ ಸಮಸ್ಯೆಗಳು, ಪರೀಕ್ಷಾ ಹಾಗೂ ಮೌಲ್ಯಮಾಪನ ಕಾರ್ಯ ನಿರ್ವಹಣಾ ಸಮಸ್ಯೆಗಳು ಇವೇ ಇತ್ಯಾದಿ ವಿಷಯಗಳು ಯಾವುದೇ ಪರಿಹಾರವನ್ನು ಕಾಣದೆ, ಪರಿಹಾರಗೊಳ್ಳುವ ನಿರೀಕ್ಷೆಯೂ ಇಲ್ಲದೆ ಹಾಗೆಯೇ ಮುಂದುವರಿಯುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು