6:03 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಶಿಕ್ಷಕರು ಸ್ವಮೌಲ್ಯಮಾಪನ ಮಾಡಿಕೊಂಡು ವ್ಯಕ್ತಿತ್ವ ರೂಪಿಸಿ: ಜಯಾನಂದ ಪೆರಾಜೆ

04/01/2024, 22:58

ಬಂಟ್ವಾಳ(reporterkarnataka.com): ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.
ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾತನಾಡಿ, ಶಿಕ್ಷಕರು ಸ್ವ ಮೌಲ್ಯಮಾಪನ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.


ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್ಪಿ ಸತೀಶ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್ಪಿ ನಂದಾ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಮಿ ಶೇರಾ, ಅಮೋಘ ಅನಂತಾಡಿ, ಸಚಿನ್ ಮಂಡ್ಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ , ಕೆದಿಲ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು