4:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ಹಳೆ ವಿದ್ಯಾರ್ಥಿಗಳ ಕೊಡುಗೆ ಮಹತ್ವದ್ದು: ಜಿ.ಕೆ. ಭಟ್

13/05/2022, 07:41

ಮಂಗಳೂರು(reporterkarnataka.com): ಶಿಕ್ಷಣ ಸಂಸ್ಥೆಗಳೊಂದಿಗೆ ಹಳೆ ವಿದ್ಯಾರ್ಥಿಗಳು ನಿಕಟ ಸಂಪರ್ಕದಲ್ಲಿದ್ದು ಸಂಸ್ಥಗಳ ಸರ್ವತೋಮುಖ ಬೆಳವಣಿಗೆಗೆ ತಮ್ಮಿಂದಾದ ಸಹಕಾರ ನೀಡಿದಲ್ಲಿ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ ಎಂದು ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹೇಳಿದರು.

ಅವರು ಇತ್ತೀಚೆಗೆ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವು ಆಯೋಜಿಸಿದ್ದ “ಬೆಸೆಂಟ್‌ ಡೊಂಜಿ  ದಿನ” ಎಂಬ ವಿದ್ಯಾರ್ಥಿ ಜೀವನದ ಹಳೆಯ ನೆನಪುಗಳನ್ನು ಮೆಲುಕುಹಾಕುವ ವಿನೂತನ ಕರ‍್ಯಕ್ರಮದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳಿಗೆ ಹಳೆ ವಿದ್ಯಾರ್ಥಿಗಳು ಆಧಾರ ಸ್ತಂಭಗಳು, ಸಂಸ್ಥೆಗಳ ಏಳಿಗೆಗೆ ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಬೇಕು ಎಂದರು. 

ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿನೂತನ ಕರ‍್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಇನ್ನೋರ್ವ ಅತಿಥಿ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀನಾರಾಯಣ ಭಟ್ ಅವರು ಮಾತನಾಡಿ ಹಳೆ ವಿದ್ಯಾರ್ಥಿಗಳ ವಿನೂತನ ಕಾರ‍್ಯಕ್ರಮವನ್ನು ಶ್ಲಾಘಿಸಿ ಶುಭಕೋರಿದರು.

ವಿವಿಧ ರೀತಿಯ ಆಟೋಟಗಳನ್ನು ಆಯೋಜಿಸಲಾಗಿತ್ತು. ಸುಮಾರು 100ಕ್ಕಿಂತ ಹೆಚ್ಚು ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರ ಗಣಪತಿ ಭಟ್, ಸಂಘದ ಅಧ್ಯಕ್ಷ  ಆದಿತ್ಯ ಶೆಟ್ಟಿ, ಕಾರ‍್ಯದರ್ಶಿ ರಾಜೇಶ್ ಮೂದಲಿಯಾರ್ ಉಪಸ್ಥಿತರಿದ್ದರು. 

ಪದ್ಮಜಾ ಪ್ರಾರ್ಥನೆಗೈದರು. ಸಂಘದ ಮಾಜಿ ಅಧ್ಯಕ್ಷ. ಪ್ರದೀಪ್ ಕಾರ‍್ಯಕ್ರಮ ನಿರೂಪಿಸಿ ವಂದಿಸಿದರು.

ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಡಾ. ವಾಸಪ್ಪ ಗೌಡ ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಹಳೆ ವಿದ್ಯಾರ್ಥಿಗಳ ಈ ವಿನೂತನ ಕರ‍್ಯಕ್ರಮವನ್ನು ಶ್ಲಾಘಿಸಿದರು ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಅಭಿನಂದಿಸಿದರು.

ಸಂಘದ ಅಧ್ಯಕ್ಷ  ಆದಿತ್ಯ ಶೆಟ್ಟಿ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಲ್ತೇಶ್ ಮೊಗವೀರ್ ಉಪಸ್ಥಿತರಿದ್ದರು. ಕ್ರೀಡಾ ಕರ‍್ಯದರ್ಶಿ  ಪ್ರಣವ್ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

ಆದಿತ್ಯ ಶೆಟ್ಟಿ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು