1:51 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು