1:15 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ: ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ವಸತಿ ಸಚಿವ ಜಮೀರ್ ಅಹಮದ್

05/09/2023, 19:45

ಮಂಗಳೂರು(reporterkarnataka.com) : ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ಶಿಕ್ಷಣದಿಂದಲೇ ಭವಿಷ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭಿಪ್ರಾಯಪಟ್ಟರು.
ಕಣಚೂರು ವೈದ್ಯಕೀಯ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತಾನಾಡಿದ ಅವರು, ಶಿಕ್ಷಣ ಇಲ್ಲದಿದ್ದರೆ ಶೂನ್ಯ. ರಾಜಕೀಯ ಅಧಿಕಾರ ಸಿಗಬಹುದು. ಆದರೆ ಶಿಕ್ಷಣ ಇಲ್ಲದಿದ್ದರೆ ಏನೂ ಸಾಧಿಸಲಾಗದು ಎಂದು ಅವರು ನುಡಿದರು.


ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು. ಕೆಎಂಡಿಸಿ ಹಾಗೂ ಅಲ್ಪಸಂಖ್ಯಾತ ನಿರ್ದೇಶನಾಲಯದ ವತಿಯಿಂದ ಎಂಬಿಬಿಸ್, ಎಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಕ್ಕೆ ಸಾಕಷ್ಟು ನೆರವು ದೊರೆಯುತ್ತಿದೆ. ವೈದ್ಯಕೀಯ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ 5 ಲಕ್ಷ ರೂ. ಗೆ ಹೆಚ್ಚಿಸಲು, ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 20 ರಿಂದ 30 ಲಕ್ಷ ರೂ. ವರೆಗೆ ಹೆಚ್ಚಿಸಲು ತೀರ್ಮಾನ ಮಾಡಿದ್ದೇವೆ. ಇದರ ಅನುಕೂಲ ಪಡೆಯಬೇಕು ಎಂದು ಹೇಳಿದರು.
ಕಣಚೂರು ವಿದ್ಯಾಸಂಸ್ಥೆ ಯಲ್ಲಿ 2018 ರಲ್ಲಿ 7 ಸಾವಿರ ಮಕ್ಕಳು ಪ್ರವೇಶ ಪಡೆದಿದ್ದು, ಈಗ ಅದರ ಸಂಖ್ಯೆ 10 ಸಾವಿರಕ್ಕೆ ಏರಿದೆ. ಇದು ಸಂಸ್ಥೆಯು ಗುಣಮಟ್ಟ ಶಿಕ್ಷಣ ನೀಡುತ್ತಿರುವುದಕ್ಕೆ ಸಾಕ್ಷಿ ಎಂದು ಅವರು ತಿಳಿಸಿದರು.
ಪೌರಾಡಳಿತ ಸಚಿವ ರಹೀಮ್ ಖಾನ್, ಮಾತನಾಡಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಶಿಕ್ಷಣ ಕ್ಕೆ ಹೆಚ್ಚು ಒತ್ತು ಕೊಟ್ಟು ಬಡ ಕುಟುಂಬದ ಮಕ್ಕಳಿಗೆ ಇಲಾಖೆ ಮೂಲಕ ಉತ್ತಮ ನೆರವು ಕೊಡಿಸುತ್ತಿದ್ದಾರೆ ಎಂದು ತಿಳಿಸಿದರು.
ಕಣಚೂರು ವಿದ್ಯಾಸಂಸ್ಥೆ ಶೇ.100 ರಷ್ಟು ಫಲಿತಾಂಶ ಪಡೆದಿರುವುದು ಸಂತೋಷಕರ ಎಂದು ಅವರು ಹೇಳಿದರು.
ಕೆಎಂಡಿಸಿ ಅರಿವು ಯೋಜನೆಯಡಿ ಮೂರು ಲಕ್ಷ ರೂ. ಸಾಲ ಪಡೆದ ರಾಯಚೂರಿನ ಮೊಹಮದ್ ಅನ್ನಾನ್, ಶಿವಮೊಗ್ಗದ ಮೊಹಮದ್ ಸಲ್ಮಾನ್ ಅಹಮದ್ ಮಾತನಾಡಿ, ಸಾಲ ಸಿಕ್ಕಿದ್ದರಿಂದ ನಮಗೆ ತುಂಬಾ ಅನುಕೂಲ ಆಗಿದೆ. ಸಾಲದ ಮೊತ್ತ ಐದು ಲಕ್ಷ ರೂ. ಹೆಚ್ಚಿಸುವ ಪ್ರಸ್ತಾಪದಿಂದ ನಮ್ಮಂತಹ ಬಡ ಕುಟುಂಬದ ಮಕ್ಕಳಿಗೆ ವರದಾನ ಆಗಲಿದೆ. ಇಂತಹ ಕ್ರಮಕ್ಕೆ ಮುಂದಾದ ಸಚಿವ ಜಮೀರ್ ಅಹಮದ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್,
ಸಂಸ್ಥೆ ಮುಖ್ಯಸ್ಥ ಡಾ. ಹಾಜಿ ಯು ಕೆ ಮೋನು, ಡಾ. ಯು. ಟಿ.ಇಫ್ತಾಕಾರ್ ಅಲಿ, ಜಿ. ಎ. ಬಾವ, ಅಬ್ದುಲ್ ರೆಹಮಾನ್, ಮುಕುಲ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮ ದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಹಾಗೂ ರಹೀಮ್ ಖಾನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು