4:20 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್

11/07/2022, 23:37

ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ.

ಆದಷ್ಟು ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಬೇಕು. ಅಧಿಕೃತ ಆದೇಶವಾದ ಕೂಡಲೇ ಈಗಾಗಲೇ ಕರೆ ನೀಡಲಾದ ಪ್ರತಿಭಟನಾ ಸಭೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಾಗುವುದು. ಗುರುಗಳ ಪಠ್ಯ ವಿಚಾರದಲ್ಲಿ ಸತ್ಯಾಂಶವನ್ನು ಸಮಾಜದ ಮುಂದಿಟ್ಟ ಮಾಧ್ಯಮಗಳಿಗೆ, ಸಮಾಜವಿಜ್ಞಾನದಲ್ಲಿ ಮರುಸೇರ್ಪಡೆಗೊಳಿಸಲು ಒತ್ತಾಯಿಸಿದ ಗುರುಗಳ ಅನುಯಾಯಿಗಳಿಗೆ, ಹೋರಾಟ ಬೆಂಬಲಿಸಿದ ಸಮಾಜದ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಹಾಗೂ ಗಾಳಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಮಸ್ತ ಸಮಾಜ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು.

ಇದೊಂದು ಸಂಘರ್ಷ ರಹಿತ ಹೋರಾಟಕ್ಕೆ ಸಂದ ಜಯ. ಮುಂದೆಯೂ ಗುರುಗಳ ತತ್ವದಂತೆ ಅನ್ಯಾಯದ ವಿರುದ್ಧ ಯಾವುದೇ ರಾಜಕೀಯ, ಸಂಘರ್ಷ ಇಲ್ಲದೆ ಹೋರಾಡೋಣ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು