2:07 PM Saturday1 - November 2025
ಬ್ರೇಕಿಂಗ್ ನ್ಯೂಸ್
Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:…

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್

11/07/2022, 23:37

ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ.

ಆದಷ್ಟು ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಬೇಕು. ಅಧಿಕೃತ ಆದೇಶವಾದ ಕೂಡಲೇ ಈಗಾಗಲೇ ಕರೆ ನೀಡಲಾದ ಪ್ರತಿಭಟನಾ ಸಭೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಾಗುವುದು. ಗುರುಗಳ ಪಠ್ಯ ವಿಚಾರದಲ್ಲಿ ಸತ್ಯಾಂಶವನ್ನು ಸಮಾಜದ ಮುಂದಿಟ್ಟ ಮಾಧ್ಯಮಗಳಿಗೆ, ಸಮಾಜವಿಜ್ಞಾನದಲ್ಲಿ ಮರುಸೇರ್ಪಡೆಗೊಳಿಸಲು ಒತ್ತಾಯಿಸಿದ ಗುರುಗಳ ಅನುಯಾಯಿಗಳಿಗೆ, ಹೋರಾಟ ಬೆಂಬಲಿಸಿದ ಸಮಾಜದ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಹಾಗೂ ಗಾಳಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಮಸ್ತ ಸಮಾಜ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು.

ಇದೊಂದು ಸಂಘರ್ಷ ರಹಿತ ಹೋರಾಟಕ್ಕೆ ಸಂದ ಜಯ. ಮುಂದೆಯೂ ಗುರುಗಳ ತತ್ವದಂತೆ ಅನ್ಯಾಯದ ವಿರುದ್ಧ ಯಾವುದೇ ರಾಜಕೀಯ, ಸಂಘರ್ಷ ಇಲ್ಲದೆ ಹೋರಾಡೋಣ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು