2:37 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಶಿಶಿಲದಲ್ಲೊಬ್ಬ ಮಾಡರ್ನ್ ರಾಕ್ಷಸ: ಹೆಂಡ್ತಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಕಣ್ಣನ್ನೇ ಕಚ್ಚಿ ಹೊರಗೆಳೆದ ದುಷ್ಟ

19/12/2023, 22:10

ಬೆಳ್ತಂಗಡಿ(reporterkarnataka.com): ಆತ ಬರೇ ಕ್ರೂರಿಯಷ್ಟೇ ಅಲ್ಲ, ಮಹಾ ರಾಕ್ಷಸ. ಸದಾ ಕುಡಿತದ ದಾಸನಾಗಿದ್ದ ಆತ ಕುಡಿತದ ಮತ್ತಿನಲ್ಲ ಮನೆಗೆ ಬಂದು ಹೆಂಡ್ತಿ – ಮಗಳಿಗೆ ಹೊಡೆದದ್ದು ಮಾತ್ರವಲ್ಲ, ಕೈಹಿಡಿದ ಪತ್ನಿಯ ಕಣ್ಣು ಹೊರಗೆ ಬರುವಂತೆ ಕಚ್ಚಿ ಗಾಯಗೊಳಿಸಿದ್ದಾನೆ. ಗಾಯಗೊಂಡ ಪತ್ನಿ ಮತ್ತು ಪುತ್ರಿ ಆಸ್ಪತ್ರೆ ಸೇರಿದ್ದಾರೆ.
ಇದು ನಡೆದದ್ದು ದೂರದ ಬಿಹಾರ ಅಥವಾ ಉತ್ತರ ಪ್ರದೇಶದಲ್ಲಿ ಅಲ್ಲ. ಬದಲಿಗೆ, ನಮ್ಮ ನೆರೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ.
ಶಿಶಿಲದ ಕೋಟೆಬಾಗಿಲು ನಿವಾಸಿಯಾದ ಸುರೇಶ ಗೌಡ ಸೋಮವಾರ ತಡರಾತ್ರಿ ಕುಡಿದು ಬಂದು ಪತ್ನಿ ಹಾಗೂ ತನ್ನ 19ರ ಹರೆಯದ ಪುತ್ರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಷ್ಟಕ್ಕೆ ಸಮಾಧಾನ ಹೊಂದಿದ ಆತ ಹೆಂಡ್ತಿ ಎಡ ಕೆನ್ನೆಯನ್ನು ಕಚ್ಚಿ ಗಾಯಗೊಳಿಸಿದ್ದು, ಮಾತ್ರವಲ್ಲದೆ ಎಡಕಣ್ಣನ್ನು ಕಚ್ಚಿ ಹೊರಗೆ ಎಳೆದಿದ್ದಾನೆ. ಬಳಿಕ ದೊಣ್ಣೆಯಿಂದ ಹೊಡೆದಿದ್ದಾನೆ. ಇದನ್ನು ತಡೆಯಲು ಬಂದ ಮಗಳ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ಮಗಳು ತಂದೆಯಿಂದ ತಪ್ಪಿಸಿಕೊಂಡು ನೆರೆಮನೆಗೆ ಬಂದು ವಿಷಯ ತಿಳಿಸಿದ್ದಾಳೆ. ಅಷ್ಟರಲ್ಲಿ ಹೆಂಡ್ತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ನೆರೆಹೊರೆಯವರು ಬರುತ್ತಿದ್ದಂತೆ ಸುರೇಶ್ ಗೌಡ ಕತ್ತಲಲ್ಲಿ ತಪ್ಪಿಸಿಕೊಂಡಿದ್ದಾನೆ. ತಾಯಿ ಮತ್ತು ಮಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು