6:05 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಶಿಶಿಲದಲ್ಲೊಬ್ಬ ಮಾಡರ್ನ್ ರಾಕ್ಷಸ: ಹೆಂಡ್ತಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಕಣ್ಣನ್ನೇ ಕಚ್ಚಿ ಹೊರಗೆಳೆದ ದುಷ್ಟ

19/12/2023, 22:10

ಬೆಳ್ತಂಗಡಿ(reporterkarnataka.com): ಆತ ಬರೇ ಕ್ರೂರಿಯಷ್ಟೇ ಅಲ್ಲ, ಮಹಾ ರಾಕ್ಷಸ. ಸದಾ ಕುಡಿತದ ದಾಸನಾಗಿದ್ದ ಆತ ಕುಡಿತದ ಮತ್ತಿನಲ್ಲ ಮನೆಗೆ ಬಂದು ಹೆಂಡ್ತಿ – ಮಗಳಿಗೆ ಹೊಡೆದದ್ದು ಮಾತ್ರವಲ್ಲ, ಕೈಹಿಡಿದ ಪತ್ನಿಯ ಕಣ್ಣು ಹೊರಗೆ ಬರುವಂತೆ ಕಚ್ಚಿ ಗಾಯಗೊಳಿಸಿದ್ದಾನೆ. ಗಾಯಗೊಂಡ ಪತ್ನಿ ಮತ್ತು ಪುತ್ರಿ ಆಸ್ಪತ್ರೆ ಸೇರಿದ್ದಾರೆ.
ಇದು ನಡೆದದ್ದು ದೂರದ ಬಿಹಾರ ಅಥವಾ ಉತ್ತರ ಪ್ರದೇಶದಲ್ಲಿ ಅಲ್ಲ. ಬದಲಿಗೆ, ನಮ್ಮ ನೆರೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ.
ಶಿಶಿಲದ ಕೋಟೆಬಾಗಿಲು ನಿವಾಸಿಯಾದ ಸುರೇಶ ಗೌಡ ಸೋಮವಾರ ತಡರಾತ್ರಿ ಕುಡಿದು ಬಂದು ಪತ್ನಿ ಹಾಗೂ ತನ್ನ 19ರ ಹರೆಯದ ಪುತ್ರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಅಷ್ಟಕ್ಕೆ ಸಮಾಧಾನ ಹೊಂದಿದ ಆತ ಹೆಂಡ್ತಿ ಎಡ ಕೆನ್ನೆಯನ್ನು ಕಚ್ಚಿ ಗಾಯಗೊಳಿಸಿದ್ದು, ಮಾತ್ರವಲ್ಲದೆ ಎಡಕಣ್ಣನ್ನು ಕಚ್ಚಿ ಹೊರಗೆ ಎಳೆದಿದ್ದಾನೆ. ಬಳಿಕ ದೊಣ್ಣೆಯಿಂದ ಹೊಡೆದಿದ್ದಾನೆ. ಇದನ್ನು ತಡೆಯಲು ಬಂದ ಮಗಳ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ಮಗಳು ತಂದೆಯಿಂದ ತಪ್ಪಿಸಿಕೊಂಡು ನೆರೆಮನೆಗೆ ಬಂದು ವಿಷಯ ತಿಳಿಸಿದ್ದಾಳೆ. ಅಷ್ಟರಲ್ಲಿ ಹೆಂಡ್ತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ನೆರೆಹೊರೆಯವರು ಬರುತ್ತಿದ್ದಂತೆ ಸುರೇಶ್ ಗೌಡ ಕತ್ತಲಲ್ಲಿ ತಪ್ಪಿಸಿಕೊಂಡಿದ್ದಾನೆ. ತಾಯಿ ಮತ್ತು ಮಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು