10:07 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿ: ಖಾಸಗಿ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಕರವೇ ವಿರೋಧ; ಯಾಕೆ ಓದಿ ನೋಡಿ

07/08/2022, 10:26

ಮಡಿಕೇರಿ(reporterkarnataka.com):
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಣ್ಣಿನ ಶಿಬಿರ ನಡೆಯುತ್ತಿರುವುದು ಸ್ವಾಗತಾರ್ಹ. ಆದರೆ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ ನಡೆಸುವುದಕ್ಕೆ ತಮ್ಮ ವಿರೋಧ ಇರುವುದಾಗಿ ಕರವೇ ಹೇಳಿದೆ.

ಶಸ್ತ್ರ ಚಿಕಿತ್ಸೆಗೆ ಬರುವವರಿಗೆ ಸಂಧ್ಯಾ ಸುರಕ್ಷಾ ಕಾರ್ಡ್ ಇರಬೇಕು ಎಂದು ತಿಳಿಸಲಾಗಿದೆ.

ಶನಿವಾರಸಂತೆ ಮತ್ತು ಗೌಡಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ಹೆಚ್ಚಾಗಿ ಬಡವರು ಹಾಗೂ ಕೂಲಿ ಕಾರ್ಮಿಕರು ಇದ್ದು, ಇವರಿಗೆಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ. ಸಂಧ್ಯಾ ಸುರಕ್ಷಾ ಕಾರ್ಡ್ ಇರುವವರು ಕಡಿಮೆ. ಸಂಧ್ಯಾಸುರಕ್ಷಾ ಇಲ್ಲದವರಿಗೆ ಕಡಿಮೆ ದರದಲ್ಲಿ ಆಪರೇಷನ್ ಮಾಡುತ್ತವೆಂದು ಖಾಸಗಿ ಆಸ್ಪತ್ರೆಯವರು ಹಣ ಪೀಕಿಸುತ್ತಾರೆ.ಈಕೆಲಸಕ್ಕೆ ನಮ್ಮ ವಿರೋಧ ಇದೆ. ಹಾಗಾಗಿ ಖಾಸಗಿ ಆಸ್ಪತ್ರೆಗೆ ನೀಡುವುದಕ್ಕೆ ನಮ್ಮ ವಿರೋಧವಿದೆ ಎಂದು ಕರವೇ ಹೇಳಿದೆ.


ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಅಂಧತ್ವ ನಿವಾರಣೆ ಕಾರ್ಯಕ್ರಮಗಳು ತುಂಬಾ ಇದೆ. ಇದನ್ನು ಸದ್ಬಳಕೆ ಮಾಡಿಕೊಂಡು ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ಮಾಡಿಸಿ ಕೊಡಬಹುದಿತ್ತು. ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿಯಲ್ಲಿರುವ ಬಡ ಮತ್ತು ಕೂಲಿ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ಮಾತ್ರ ಇರುತ್ತದೆ. ಆದರೆ ಸಂಧ್ಯಾಸುರಕ್ಷಾ ಇರುವವರಿಗೆ ಮಾತ್ರ ಉಚಿತವಾಗಿ ಆಪರೇಶನ್ ಆಗುತ್ತದೆ . ಸಂಧ್ಯಾಸುರಕ್ಷಾ ಇಲ್ಲದೆ ವ್ಯಕ್ತಿಗಳು ಬಂದರೆ ಅವರ ಹತ್ತಿರ ಮಾತನಾಡಿ ಕಡಿಮೆ ದರದಲ್ಲಿ ಆಪರೇಷನ್ ಮಾಡಿಕೊಡುತ್ತೇವೆಂದು ಹಣ ಪೀಕುವ ಕೆಲಸ ಇಲ್ಲಿ ನಡೆದೇ ನಡೆಯುತ್ತದೆ. ಅದಲ್ಲದೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ತುಂಬಾ ಒಳ್ಳೆಯ ವೈದ್ಯರುಗಳಿದ್ದಾರೆ ಹಾಗೂ ಕಣ್ಣಿನ ಆಸ್ಪತ್ರೆ ಹೈಟೆಕ್ ಮಾಡಲಾಗಿದೆ. ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಲಿನ ವೈದ್ಯರುಗಳು ಹಾಗೂ ಸಿಬ್ಬಂದಿಗಳು ರೋಗಿಗಳನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಮಡಿಕೇರಿ ಜಿಲ್ಲಾ  ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಹಾಗೂ  ಸಿಬ್ಬಂದಿಗಳಲ್ಲಿ ಉಚಿತ ಕಣ್ಣಿನ ಶಿಬಿರ ಮಾಡಿಸಿದರೆ ಬಡವರ್ಗದವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಈ ಯೋಜನೆ ತಲುಪುತ್ತದೆ.

ಅದೆಲ್ಲವನ್ನು ಬಿಟ್ಟು ಸರ್ಕಾರ ಅಧೀನದಲ್ಲಿರುವ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು  ಖಾಸಗಿ ಆಸ್ಪತ್ರೆಯ ಮೊರೆ ಹೋಗಿರುವುದು ಯಾಕೆ ಎಂಬ ಕರವೇ ಪ್ರಶ್ನಿಸಿದೆ.

ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿ ಶಿಬಿರದಲ್ಲಿ ಬಡವರಿಗೆ ಯಾವುದೇ ಪ್ರಯೋಜನ ಇಲ್ಲ. ಹಾಗಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ  ಅವರು ಗ್ರಾಮ ಪಂಚಾಯಿತಿಯವರಿಗೆ ಸರಿಯಾದ ನಿರ್ದೇಶನ ಕೊಡಬೇಕಾಗಿ ಕರವೇ ಮನವಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು