8:58 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಶಿರಾಡಿ ಘಾಟ್ ಸುರಂಗ ಮಾರ್ಗ ರಚನೆ: ತಜ್ಞರ ತಂಡದಿಂದ ಪರಿಶೀಲನೆ ಆರಂಭ; ಪರಿಸರವಾದಿ ಸಂಘಟನೆಗಳಿಂದ ವಿರೋಧ

06/01/2022, 13:41

ಅಶೋಕ್ ಕಲ್ಲಡ್ಕ ಮಂಗಳೂರು

ರಾಜೇಶ್ವರಿ ಸಕಲೇಶಪುರ ಹಾಸನ

info.reporterkarnataka@gmail.om

ಬಂದರು ನಗರಿ ಮಂಗಳೂರು ಹಾಗೂ ರಾಜಧಾನಿ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಂಗ ಮಾರ್ಗ ರಚನೆ ಕುರಿತು ಮೂವರು ತಜ್ಞರ ತಂಡ ಪರಿಶೀಲನೆ ಆರಂಭಿಸಿದೆ.

ದಕ್ಷಿಣ ಕನ್ನಡ ಮತ್ತು ಸಕಲೇಶಪುರ ನಡುವೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ಪ್ರದೇಶದಲ್ಲಿ ಸುಮಾರು 23.6 ಕಿಮೀ. ಉದ್ದದ ಸುರಂಗ ಮಾರ್ಗವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಕಡಲ ನಗರಿ ಮಂಗಳೂರಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಲಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಪ್ರತಿ ಮಳೆಗಾಲದಲ್ಲಿ ಶಿರಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸುರಂಗ ಮಾರ್ಗ ರಚನೆ ಪ್ರಸ್ತಾಪಿಸಲಾಗಿದೆ. ಇಷ್ಟೇ ಅಲ್ಲದೆ ಸುರಂಗ ಮಾರ್ಗ ರಚನೆ ಎಕ್ಸ್ ಪ್ರೆಸ್ ವೇಗೆ ಹಾದಿ ಮಾಡಿಕೊಡಲಿದೆ. ಬಂದರು ನಗರಿ ಮಂಗಳೂರಿನಲ್ಲಿ ಇದು ಕೈಗಾರಿಕಾ ಅಭಿವೃದ್ಧಿಗೂ ಪೂರಕವಾಗಲಿದೆ ಎನ್ನಲಾಗಿದೆ.

ಹಾಸನ – ಸಕಲೇಶಪುರ – ಮಾರನಹಳ್ಳಿ ವರೆಗಿನ ಹಲವಾರು ರಸ್ತೆ ಬಳಕೆದಾರರು ರಸ್ತೆಯ ಕಳಪೆ ಸ್ಥಿತಿಯ ಬಗ್ಗೆ ಈಗಾಗಲೇ ಕಳವಳ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಡಳಿತ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಬಂದರು ನಗರ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಶಾಶ್ವತವಾಗಿ ಸರಿಪಡಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಮಾರೇನಹಳ್ಳಿ ಅಣೆಕಟ್ಟಿನಲ್ಲಿ ದುರಸ್ತಿ ಕಾರ್ಯ ಪ್ರಾರಂಭವಾಗಿದೆ ಮತ್ತು ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆಯಿದೆ.  


ಈ ನಡುವೆ ಶಿರಾಡಿ ಘಾಟ್ ನಲ್ಲಿ ಸುರಂಗ ರಸ್ತೆ ಯೋಜನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುರಂಗ ಮಾರ್ಗ ರಚನೆಯಿಂದ

ಪಶ್ಚಿಮ ಘಟ್ಟಗಳು ಮತ್ತಷ್ಟು ಹಾಳಾಗುತ್ತದೆ ಎಂದು ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೈಗಾರಿಕಾ ಸಂಸ್ಥೆಯು ಈ ಪ್ರಸ್ತಾಪನೆಯನ್ನು ಬೆಂಬಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು