10:00 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಶಿರಾಳಕೊಪ್ಪ: ಫ.ಗು. ಹಳಕಟ್ಟಿ ದತ್ತಿ ಕಾರ್ಯಕ್ರಮ ಉದ್ಘಾಟನೆ, ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

14/10/2023, 23:16

ಶಿರಾಳಕೊಪ್ಪ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮಿತಿ, ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಸಮಿತಿ, ಶಿವಮೊಗ್ಗ ಜನಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಶಿರಾಳಕೊಪ್ಪ ವಿಕಾಸ ಶಾಲೆ ಸಭಾಂಗಣದಲ್ಲಿ ಕೆ. ನಿವೇದಿತಾ ಕೆ. ರಾಜು ಅವರು ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ನೀಡಿದ ದತ್ತಿ ಕಾರ್ಯಕ್ರಮ ಉದ್ಘಾಟನೆ ಮತ್ತು ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸುವ ಸಮಾರಂಭ ನಡೆಯಿತು.
ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಿದರು. ಟಿ. ಎಂ. ಮಂಜಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ವಸಂತಕುಮಾರ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ಎಚ್. ಎಸ್. ರಘು, ಉಪನ್ಯಾಸಕರಾದ ಪಿ. ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದತ್ತಿ ದಾನಿಗಳಾದ ದಿ. ಫಕೀರವ್ವ ಅವರ ಅಗಲಿಕೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗೌರಮ್ಮ ಸ್ವಾಗತಿಸಿದರು. ಚಂದ್ರಶೇಖರ ನಿರೂಪಿಸಿದರು. ಕಜಾಪ ಜಿಲ್ಲಾ ಕಾರ್ಯದರ್ಶಿ ಸೋಮಿನಕಟ್ಟಿ, ಪತ್ರಕರ್ತರಾದ ಶೇಷಗಿರಿ, ಡಾ. ಮುರುಘರಾಜ್, ಉಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು