4:43 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ 

17/09/2021, 09:15

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ
info.reporterkarnataka@gmail.com

ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದಿಗೆ ಜರುಗಲಿದೆ.

ಮುಮ್ಮೇಟ್ಟಗುಡ್ಡ ಶ್ರೀ ಬನಸಿದ್ಧ ಮಹಾರಾಜ ಅವರ ಸಾನಿಧ್ಯದಲ್ಲಿ ನಾಗಠಾಣ ಮಾಜಿ ಶಾಸಕ ವಿಠ್ಠಲ ದೋ. ಕಟಕದೊಂಡ ಉದ್ಘಾಟಿಸುವರು. ಮಖಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಚವ್ಹಾಣ ಅಧ್ಯಕ್ಷತೆ ವಹಿಸುವರು. ವಿಜಯಪುರ ಜಿಪಂ ನಿಕಟಪೂರ್ವ ಅಧ್ಯಕ್ಷೆ ಸುಜಾತಾ ಸೋ. ಕಳ್ಳಿಮನಿ ಹಾಗೂ ಬಬಲೇಶ್ವರ ಪಿಎಸ್ ಐ ಸೋಮನ ಗೌಡ್ರು ಜ್ಯೋತಿ ಬೆಳಗಿಸುವರು. 

ವಿಜಯಪುರ ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನಪ್ಪ ಗೋ. ದಳವಾಯಿ ಹಾಗೂ ವಿಜಯಪುರ ತಾಪಂ ನಿಕಟಪೂರ್ವ ಅಧ್ಯಕ್ಷ ಕಾಳಪ್ಪ ಬಾ. ಬೆಳ್ಳುಂಡಗಿ ಗಜಾನನ ಫೋಟೋ ಪೂಜೆ ನೆರವೇರಿಸುವರು.

ವಿಜಯಪುರ ಎಪಿಎಂಸಿ ಮಾಜಿ ಸದಸ್ಯ ಸಿದ್ದಣ್ಣ ಸಕ್ರಿ, ಮಖಣಾಪುರ ಪಿಕೆಪಿಎಸ್ ಉಪಾಧ್ಯಕ್ಷ ಪೂಜಪ್ಪ ಮಾ. ಪೂಜಾರಿ ರಂಗಪೂಜೆ ನೆರವೇರಿಸುವರು. ವಿಜಯಪುರ ಬಂಜಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಎಲ್. ಚವ್ಹಾಣ, ವಿಜಯಪುರ ತಾಪಂ ನಿಕಟಪೂರ್ವ ಉಪಾಧ್ಯಕ್ಷ ಪಿಂಟು ಗೋ ರಾಠೋಡ ಮಿಂಚು ಹಾರಿಸುವರು. ಮಖಣಾಪುರ ಗ್ರಾಪಂ ಉಪಾಧ್ಯಕ್ಷ ಧನಸಿಂಗ್ ಚವ್ಹಾಣ ಬಲೂನು ಹಾರಿಸುವರು.

ಮುಖ್ಯ ಅತಿಥಿಗಳಾಗಿ ಖ್ಯಾತ ವಾಗ್ಮಿ ಮೋಹನ ಮೇಟಿ, ಪೊಲೀಸ್ ಇಲಾಖೆಯ ದುಂಡಪ್ಪ ಥಂಬದ, ಶಿರನಾಳ ಗ್ರಾಪಂ ಸದಸ್ಯ ಬೆಳ್ಳೋಗಸಿದ್ಧ ಶಿ. ಪೂಜಾರಿ, ಮಖಣಾಪುರ ಎಲ್ ಟಿ2 ಸದಸ್ಯ ಪ್ರಕಾಶ ಮೋ. ಚವ್ಹಾಣ, ಶಿರನಾಳ ಗ್ರಾಪಂ ಸದಸ್ಯ ಡಾ. ವಿಜಯ ಕುಮಾರ್ ಸೋ. ಬಗಲಿ, ಶಿರನಾಳ ಗ್ರಾಪಂ ಸದಸ್ಯ ಕಲ್ಲಪ್ಪ ಸಿ. ತಿಕೋಟಿ, ಶಿರನಾಳ ಗ್ರಾಪಂ ಸದಸ್ಯರಾದ ಗಂಗಾಬಾಯಿ ಪಾ. ಲೋಖಂಡೆ, ಮಹಾದೇವಿ ಸು. ಹಳ್ಳಿ ಹಾಗೂ ಕೊಂದನ ಸಿ. ಸಯದ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು