12:41 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ 

17/09/2021, 09:15

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ
info.reporterkarnataka@gmail.com

ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದಿಗೆ ಜರುಗಲಿದೆ.

ಮುಮ್ಮೇಟ್ಟಗುಡ್ಡ ಶ್ರೀ ಬನಸಿದ್ಧ ಮಹಾರಾಜ ಅವರ ಸಾನಿಧ್ಯದಲ್ಲಿ ನಾಗಠಾಣ ಮಾಜಿ ಶಾಸಕ ವಿಠ್ಠಲ ದೋ. ಕಟಕದೊಂಡ ಉದ್ಘಾಟಿಸುವರು. ಮಖಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಚವ್ಹಾಣ ಅಧ್ಯಕ್ಷತೆ ವಹಿಸುವರು. ವಿಜಯಪುರ ಜಿಪಂ ನಿಕಟಪೂರ್ವ ಅಧ್ಯಕ್ಷೆ ಸುಜಾತಾ ಸೋ. ಕಳ್ಳಿಮನಿ ಹಾಗೂ ಬಬಲೇಶ್ವರ ಪಿಎಸ್ ಐ ಸೋಮನ ಗೌಡ್ರು ಜ್ಯೋತಿ ಬೆಳಗಿಸುವರು. 

ವಿಜಯಪುರ ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನಪ್ಪ ಗೋ. ದಳವಾಯಿ ಹಾಗೂ ವಿಜಯಪುರ ತಾಪಂ ನಿಕಟಪೂರ್ವ ಅಧ್ಯಕ್ಷ ಕಾಳಪ್ಪ ಬಾ. ಬೆಳ್ಳುಂಡಗಿ ಗಜಾನನ ಫೋಟೋ ಪೂಜೆ ನೆರವೇರಿಸುವರು.

ವಿಜಯಪುರ ಎಪಿಎಂಸಿ ಮಾಜಿ ಸದಸ್ಯ ಸಿದ್ದಣ್ಣ ಸಕ್ರಿ, ಮಖಣಾಪುರ ಪಿಕೆಪಿಎಸ್ ಉಪಾಧ್ಯಕ್ಷ ಪೂಜಪ್ಪ ಮಾ. ಪೂಜಾರಿ ರಂಗಪೂಜೆ ನೆರವೇರಿಸುವರು. ವಿಜಯಪುರ ಬಂಜಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಎಲ್. ಚವ್ಹಾಣ, ವಿಜಯಪುರ ತಾಪಂ ನಿಕಟಪೂರ್ವ ಉಪಾಧ್ಯಕ್ಷ ಪಿಂಟು ಗೋ ರಾಠೋಡ ಮಿಂಚು ಹಾರಿಸುವರು. ಮಖಣಾಪುರ ಗ್ರಾಪಂ ಉಪಾಧ್ಯಕ್ಷ ಧನಸಿಂಗ್ ಚವ್ಹಾಣ ಬಲೂನು ಹಾರಿಸುವರು.

ಮುಖ್ಯ ಅತಿಥಿಗಳಾಗಿ ಖ್ಯಾತ ವಾಗ್ಮಿ ಮೋಹನ ಮೇಟಿ, ಪೊಲೀಸ್ ಇಲಾಖೆಯ ದುಂಡಪ್ಪ ಥಂಬದ, ಶಿರನಾಳ ಗ್ರಾಪಂ ಸದಸ್ಯ ಬೆಳ್ಳೋಗಸಿದ್ಧ ಶಿ. ಪೂಜಾರಿ, ಮಖಣಾಪುರ ಎಲ್ ಟಿ2 ಸದಸ್ಯ ಪ್ರಕಾಶ ಮೋ. ಚವ್ಹಾಣ, ಶಿರನಾಳ ಗ್ರಾಪಂ ಸದಸ್ಯ ಡಾ. ವಿಜಯ ಕುಮಾರ್ ಸೋ. ಬಗಲಿ, ಶಿರನಾಳ ಗ್ರಾಪಂ ಸದಸ್ಯ ಕಲ್ಲಪ್ಪ ಸಿ. ತಿಕೋಟಿ, ಶಿರನಾಳ ಗ್ರಾಪಂ ಸದಸ್ಯರಾದ ಗಂಗಾಬಾಯಿ ಪಾ. ಲೋಖಂಡೆ, ಮಹಾದೇವಿ ಸು. ಹಳ್ಳಿ ಹಾಗೂ ಕೊಂದನ ಸಿ. ಸಯದ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು