8:31 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಶಿರ್ಲಾಲು: ಕಡಿಮೆ ಅಂಕದಿಂದ ಮನನೊಂದು ದ್ವಿತೀಯ ಪದವಿ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ

12/10/2021, 19:01

ಕಾರ್ಕಳ(reporterkarnataka.com) : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ.

ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊಂಡು ಮೊಬೈಲ್ ನಲ್ಲಿ ಯಾವುದೋ ಆಟ ಆಡುತ್ತಿದ್ದ. ಆತನಿಗೆ ಬುದ್ದಿ ಹೇಳಿ ಸಮಾಧಾನಪಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಒಬ್ಬನೇ ಕುಳಿತುಕೊಂಡು ಮನೆಯವರಲ್ಲಿ ಮಾತಾನಾಡದೇ ಮೌನಿಯಾಗಿದ್ದ ಎನ್ನಲಾಗಿದೆ.

ಕಾರ್ಕಳದ ಎಂಪಿಎಂ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿಯಾಗಿದ್ದ. ಪದವಿಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. 

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು