5:11 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ ನದಿಯಲ್ಲಿ ನಡೆದ ಡ್ರಜ್ಜಿಂಗ್ ಕಾರ್ಯಾಚರಣೆ

25/09/2024, 21:13

ಕಾರವಾರ(reporter Karnataka.com): ಅಂಕೋಲಾ ಸಮೀಪದ ಶಿರೂರುನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ಟ್ರಕ್ ಸಹಿತ ನಾಪತ್ತೆಯಾದ ಕೇರಳ ಮೂಲದ ಭಾರತ್ ಬೆಂಜ್ ಲಾರಿಯ ಚಾಲಕ ಅರ್ಜುನ್ ಮೃತದೇಹ ಸುಮಾರು 72 ದಿನಗಳ ಬಳಿಕ ಟ್ರಕ್ ಸಹಿತ ಪತ್ತೆಯಾಗಿದೆ.
ಅವ್ಯಾಹತ ಭಾರೀ ಗಾಳಿ ಮಳೆಗೆ ಜುಲೈ 16ರಂದು ಶಿರೂರು ಬಳಿ ಭಾರೀ ಗುಡ್ಡ ಕುಸಿತ ಉಂಟಾಗಿತ್ತು. ಗುಡ್ಡ ಕುಸಿದಿಂದ ಲಾರಿ ಸಹಿತ ಚಾಲಕ ಅರ್ಜುನ್ ನಾಪತ್ತೆಯಾಗಿದ್ದ.


ಗಂಗಾವಳಿ ನದಿಯಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ಡ್ರಜ್ಜಿಂಗ್ ಕಾರ್ಯಾಚರಣೆ ವೇಳೆ ಇಂದು ಮುಂಜಾನೆ ಡ್ರೆಜ್ಜಿಂಗ್ ಮಶಿನ್​ಗೆ ಟ್ರಕ್ ಸಿಕ್ಕಿತು. ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಅದಾಗಿತ್ತು. ಇದರೊಂದಿಗೆ ದುರಂತ ನಡೆದು ಸುಮಾರು 72 ದಿನಗಳ ಬಳಿಕ ಅರ್ಜುನ್ ಮೃತದೇಹ ದೊರೆತಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು