1:26 PM Sunday26 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ ನದಿಯಲ್ಲಿ ನಡೆದ ಡ್ರಜ್ಜಿಂಗ್ ಕಾರ್ಯಾಚರಣೆ

25/09/2024, 21:13

ಕಾರವಾರ(reporter Karnataka.com): ಅಂಕೋಲಾ ಸಮೀಪದ ಶಿರೂರುನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ಟ್ರಕ್ ಸಹಿತ ನಾಪತ್ತೆಯಾದ ಕೇರಳ ಮೂಲದ ಭಾರತ್ ಬೆಂಜ್ ಲಾರಿಯ ಚಾಲಕ ಅರ್ಜುನ್ ಮೃತದೇಹ ಸುಮಾರು 72 ದಿನಗಳ ಬಳಿಕ ಟ್ರಕ್ ಸಹಿತ ಪತ್ತೆಯಾಗಿದೆ.
ಅವ್ಯಾಹತ ಭಾರೀ ಗಾಳಿ ಮಳೆಗೆ ಜುಲೈ 16ರಂದು ಶಿರೂರು ಬಳಿ ಭಾರೀ ಗುಡ್ಡ ಕುಸಿತ ಉಂಟಾಗಿತ್ತು. ಗುಡ್ಡ ಕುಸಿದಿಂದ ಲಾರಿ ಸಹಿತ ಚಾಲಕ ಅರ್ಜುನ್ ನಾಪತ್ತೆಯಾಗಿದ್ದ.


ಗಂಗಾವಳಿ ನದಿಯಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ಡ್ರಜ್ಜಿಂಗ್ ಕಾರ್ಯಾಚರಣೆ ವೇಳೆ ಇಂದು ಮುಂಜಾನೆ ಡ್ರೆಜ್ಜಿಂಗ್ ಮಶಿನ್​ಗೆ ಟ್ರಕ್ ಸಿಕ್ಕಿತು. ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಅದಾಗಿತ್ತು. ಇದರೊಂದಿಗೆ ದುರಂತ ನಡೆದು ಸುಮಾರು 72 ದಿನಗಳ ಬಳಿಕ ಅರ್ಜುನ್ ಮೃತದೇಹ ದೊರೆತಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು