7:05 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ

19/05/2021, 10:56

ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ಕೂಡಾ ಸ್ವಾಗತಾರ್ಹ ಎಂಬುದಾಗಿ ವಿಶ್ವಹಿಂದು ಪರಿಷತ್ತು ಅಭಿನಂದಿಸಿದೆ.

ಶಿರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ವಾದಿರಾಜ ಮಠದ ಸ್ವಾಮಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಿನ್ನೆಲೆಯ ಅನಿರುದ್ಧ ಸರಳತ್ತಾಯರನ್ನು ಆಯ್ಕೆ ಮಾಡಿ ಯೋಗ್ಯ ರೀತಿಯಲ್ಲಿ ಶಾಸ್ತ್ರೋಕ್ತ  ಸನ್ಯಾಸದೀಕ್ಷೆಯ ಮೂಲಕ 

ಶ್ರೀ ವೇದವರ್ಧನ ಎಂಬ ಅಭಿನಾಮ ನೀಡಿ ಶಿರೂರು ಮಠದ ಯತಿಗಳನ್ನಾಗಿ ನೇಮಿಸಿರುವುದು ಸರ್ವರ ಪ್ರಶಂಸೆಗೆ ಕಾರಣವಾಗಿದೆ ಎಂಬುದಾಗಿ ವಿಶ್ವಹಿಂದು ಪರಿಷತ್ತಿನ ಪ್ರಾಂತ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಇತ್ತೀಚೆಗೆ ಅಷ್ಟಮಠಗಳಿಗೆ ಹೊಸ ಶಿಷ್ಯರನ್ನು ನಿಯುಕ್ತಿಗೊಳಿಸುವಾಗ ಯೋಗ್ಯ ಮಾನದಂಡಗಳನ್ನು ಅಳವಡಿಸಿ ಸತ್ಸಂಪ್ರದಾಯಕ್ಕೆ ಮುಂದಾಗಿರುವುದು ಹಿಂದು ಸಮಾಜಕ್ಕೆ ಹೆಮ್ಮೆ  ಮತ್ತು ಅಭಿಮಾನ ಮೂಡಿಸುವ ಸಂಗತಿಯಾಗಿದೆ.ಶ್ರೀಶಿರೂರು ಮಠದ ನವಯತಿಗಳಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರಿಗೆ ವಿಶ್ವಹಿಂದು ಪರಿಷತ್ತು ಶುಭಕೋರುತ್ತದೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಅವರಿಂದ ಹಿಂದು ಸಮಾಜಕ್ಕೆ ಉತ್ತಮ ಮಾರ್ಗದರ್ಶನ ಲಭಿಸುವಂತಾಗಲು ಶ್ರೀಕೃಷ್ಣನ ಅನುಗ್ರಹ ಇರಲೆಂದು ವಿಹಿಂಪ ಪ್ರಾರ್ಥಿಸುತ್ತದೆ ಎಂದು ಪ್ರೊ.ಪುರಾಣಿಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು