2:28 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶಿರೂರು; ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಚಿನ್ನಾಭರಣ ಕಳವು: ಫೇಸ್ ಬುಕ್ ಗೆಳೆಯನ ಕೃತ್ಯ

21/11/2022, 19:45

ಕುಂದಾಪುರ(reporterkarnataka.com); ಫೇಸ್ ಬುಕ್ ಮೂಲಕ ಪರಿಚಯಗೊಂಡ ಸ್ನೇಹಿತನೊಬ್ಬ ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಶಿರೂರು ಗ್ರಾಮದ ಮೇಲ್ಪೇಟೆ ನಿವಾಸಿ ಸಂತೋಷ ಮೊಗವೀರ(34) ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಯಕ್ಷಗಾನ ಕಲಾವಿದರಾಗಿದ್ದು, ಚಿಕ್ಕ ಮೇಳ ಎಂಬ ಯಕ್ಷಗಾನವನ್ನು ನಡೆಸಿಕೊಂಡಿದ್ದರು. ಇವರು ಮೇಳದ ಸಾಮಾಗ್ರಿಗಳೊಂದಿಗೆ ಶಿರೂರು ಗ್ರಾಮದ ಶಿರೂರು ಮೇಲ್ಪೆಟೆ ಎಂಬಲ್ಲಿ ಸುಭಾಷ್ ಪ್ರಭು ಅವರ ಒಂದು ಕೊಠಡಿಯಲ್ಲಿ ವಾಸವಾಗಿದ್ದರು. ಇವರಿಗೆ ಎರಡು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ‌ ಗುರುರಾಜ್ ಎಂಬವ ಪರಿಚಯವಾಗಿತ್ತು.

ನ.9ರಂದು ಸಂತೋಷ್ ಅವರ ಕೊಠಡಿಗೆ ಬಂದು ಅವರೊಂದಿಗೆ ಉಳಿದುಕೊಂಡಿದ್ದನು. ನ. 12ರಂದು ಸಂತೋಷ್ ಅವರು ಚಿಕ್ಕ ಮೇಳ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ತಾಲೂಕಿನ ಹೆರಿಕುದ್ರು ಎಂಬಲ್ಲಿಗೆ ಹೊರಟಿದ್ದರು. ಅವರೊಂದಿಗೆ ಗುರುರಾಜ್ ಕೂಡ ಹೋಗಿದ್ದನು. ಈ ವೇಳೆ ಗುರುರಾಜ್ ಕಾರ್ಯಕ್ರಮ ವಿಡಿಯೋ ಮಾಡುವ ಉದ್ದೇಶದಿಂದ ಸಂತೋಷ್ ಅವರ ಮೊಬೈಲ್ ಪಡೆದಿದ್ದನು. ಬಳಿಕ ಅವರಿಗೆ ತಿಳಿಸದೇ ಶಿರೂರು ಮೇಲ್ಪೆಟೆಗೆ ಬಂದು ಸಂತೋಷ್ ವಾಸ್ಥವ್ಯವಿರುವ ಕೊಠಡಿಯ ಬೀಗವನ್ನು ಒಡೆದು ಬ್ಯಾಗ್ ನಲ್ಲಿಟ್ಟಿದ್ದ 12 ಗ್ರಾಂ  ತೂಕದ ಚಿನ್ನದ ಕೊರಳಿನ ಚೈನ್, 4 ಗ್ರಾಂ ತೂಕದ ಚಿನ್ನದ ಉಂಗುರ, ಕಾಣಿಕೆ ಡಬ್ಬಿಯಲ್ಲಿದ್ದ 10 ಸಾವಿರ ನಗದು, ಇನ್ನೊಂದು ಡಬ್ಬಿಯಲ್ಲಿದ್ದ 1 ಸಾವಿರ ರೂ. ನಗದು ಹಾಗೂ 14 ಸಾವಿರ ಮೌಲ್ಯದ Realme ಮೊಬೈಲ್ ಫೋನ್ ಅನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 85 ಸಾವಿರ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .  

ಇತ್ತೀಚಿನ ಸುದ್ದಿ

ಜಾಹೀರಾತು