8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಶಿರ್ವ: ಮೀನು ಹಿಡಿಯುವಾಗ ಅಕಸ್ಮಾತ್ ಕಾಲು ಜಾರಿ ನೀರು ಪಾಲಾಗಿದ್ದ ದೈವ ನರ್ತಕನ ಶವ ಪತ್ತೆ

11/10/2021, 18:19

ಶಿರ್ವ(reporterkarnataka.com): ಇಲ್ಲಿನ ನಡಿಬೆಟ್ಟು ಅಣೆಕಟ್ಟು ಬಳಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಜಾರಿಬಿದ್ದು ನೀರು ಪಾಲಾದ ದೈವ ನರ್ತಕ, ಶಿರ್ವ ಮಟ್ಟಾರು  ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಅಣೆಕಟ್ಟು ಬಳಿ ಪತ್ತೆಯಾಗಿದೆ.

ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ನೇತೃತ್ವದಲ್ಲಿ ಸತೀಶ್ ಮತ್ತು ಸಿಬ್ಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ಭಾನುವಾರ ರಾತ್ರಿ ಬೆಳಕಿನ ಅಡಚಣೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ   ತನಿಖೆ ನಡೆಸುತ್ತಿದ್ದಾರೆ.

ಅಗ್ನಿಶಾಮಕದಳದ ಶಂಕರ್, ಉಮೇಶ್, ವಿನಾಯಕ, ಚಂದ್ರಶೇಖರ, ಸುಜೇಶ್ ಮತ್ತು ಆದರ್ಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ದಿಲೀಪ್ ಚಿಕ್ಕ ವಯಸ್ಸಿನಲ್ಲೇ ಕರಾವಳಿಯಾದ್ಯಂತ ದೈವಸ್ಥಾನಗಳಲ್ಲಿ ದೈವ ನರ್ತಕರಾಗಿ, ಸೇವಕರಾಗಿ ಹೆಸರು ಮಾಡಿದ್ದರು. ಬಬ್ಬುಸ್ವಾಮಿ ದೈವದ ನರ್ತಕರಾಗಿ ಹೆಚ್ಚು ಪ್ರಸಿದ್ದಿ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು