10:24 PM Monday30 - June 2025
ಬ್ರೇಕಿಂಗ್ ನ್ಯೂಸ್
Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ…

ಇತ್ತೀಚಿನ ಸುದ್ದಿ

ಎಲ್ಲರಿಗಿಂತ ದೊಡ್ಡ ಯೋಗಿ ಶಿವ: ಯೋಗರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ

30/06/2025, 21:50

ಬೆಂಗಳೂರು(reporterkarnataka.com): ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.


ಅವರು ಶ್ವಾಸ ಯೋಗ ಸಂಸ್ಥೆ ಹಾಗೂ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಯೋಗ ರತ್ನ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಕ್ರೇನ್ ನ ಯೋಗಿನಿ ಒಲೈನಾ ತಾರಾಸೋವಾ ಅವರಿಗೆ ಪ್ರಶಸ್ತಿ ನೀಡಿ ಅವರು ಮಾತನಾಡಿದರು.
ಶ್ವಾಸ ಗುರು ವಚನಾನಂದ ಸ್ವಾಮೀಜಿ ಕರ್ನಾಟಕದಲ್ಲಿ ಯೋಗದ ದೊಡ್ಡ ಕ್ರಾಂತಿ ಮಾಡಿದ್ದಾರೆ. ಕೇವಲ ಯೋಗಿಗೆ ಸೀಮಿತವಾಗಿದ್ದ ಯೋಗವನ್ನು ಮನೆ ಮನೆಗೆ ತಲುಪಿಸುವ ಕೆಲಸ ವಚನಾನಂದ ಸ್ವಾಮಿಜಿ ಮಾಡಿದ್ದಾರೆ. ಯೋಗ ಜಗತ್ತಿನಲ್ಲಿ ಅವರ ದೊಡ್ಡ ಹೆಸರು ಇರುವುದರಿಂದ ಜಗತ್ತಿನ ಅವರ ಅಭಿಮಾನಿಗಳು ಬಂದಿದ್ದಾರೆ ಎಂದರು.
ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ. ನಾವು ಶ್ವಾಸ ತೆಗೆದುಕೊಂಡಾಗ ಅದು ಪರಮಾತ್ಮನ ಜೊತೆ ಸಂಪರ್ಕ ಹೊಂದುತ್ತದೆ. ಕಷ್ಟ ಪಡುವುದು ಯೋಗವಲ್ಲ. ಸಹಜವಾಗಿ ಮಾಡುವುದೇ ಯೋಗ, ಟು ಲೀವ್ ವೆರಿ ಲೆಸ್ ಬದುಕು ಎಷ್ಟು ಸಣ್ಣದು ಮಾಡುತ್ತೇವೆಯೊ ಅದು ಸುಂದರವಾಗಿರುತ್ತದೆ. ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳುತ್ತಾರೆ ಅವರು ಸಾವಿನ ನಂತರ ಬದುಕುವವರು ಸಾಧಕರು ಎಂದು ಹೇಳುತ್ತಾರೆ. ಸ್ವಾಮಿಜಿಗಳು 500 ವರ್ಷ ಬದುಕಿದ್ದರು ಅಂದರೆ ಅವರ ವಿಚಾರಗಳು ಈಗಲು ಇವೆ. ಕಾಲ ಮಿತಿಯನ್ನು ಮೀರಿ ಸಾಧಿಸುವುದೇ ಯೋಗ ಎಂದು ಹೇಳಿದರು.
ಸಚಿವ ಸಂತೋಷ ಲಾಡ್ ಪಾದರಸದಂತೆ ಓಡಾಡುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲವಾಗಿ ನಿಂತು ಯೋಗ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ವಾಸ ಗುರು ವಚನಾನಂದಸ್ವಾಮಿ, ಸಚಿವ ಸಂತೋಷ ಲಾಡ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು