2:52 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

ಎಲ್ಲರಿಗಿಂತ ದೊಡ್ಡ ಯೋಗಿ ಶಿವ: ಯೋಗರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ

30/06/2025, 21:50

ಬೆಂಗಳೂರು(reporterkarnataka.com): ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.


ಅವರು ಶ್ವಾಸ ಯೋಗ ಸಂಸ್ಥೆ ಹಾಗೂ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಯೋಗ ರತ್ನ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಕ್ರೇನ್ ನ ಯೋಗಿನಿ ಒಲೈನಾ ತಾರಾಸೋವಾ ಅವರಿಗೆ ಪ್ರಶಸ್ತಿ ನೀಡಿ ಅವರು ಮಾತನಾಡಿದರು.
ಶ್ವಾಸ ಗುರು ವಚನಾನಂದ ಸ್ವಾಮೀಜಿ ಕರ್ನಾಟಕದಲ್ಲಿ ಯೋಗದ ದೊಡ್ಡ ಕ್ರಾಂತಿ ಮಾಡಿದ್ದಾರೆ. ಕೇವಲ ಯೋಗಿಗೆ ಸೀಮಿತವಾಗಿದ್ದ ಯೋಗವನ್ನು ಮನೆ ಮನೆಗೆ ತಲುಪಿಸುವ ಕೆಲಸ ವಚನಾನಂದ ಸ್ವಾಮಿಜಿ ಮಾಡಿದ್ದಾರೆ. ಯೋಗ ಜಗತ್ತಿನಲ್ಲಿ ಅವರ ದೊಡ್ಡ ಹೆಸರು ಇರುವುದರಿಂದ ಜಗತ್ತಿನ ಅವರ ಅಭಿಮಾನಿಗಳು ಬಂದಿದ್ದಾರೆ ಎಂದರು.
ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ. ನಾವು ಶ್ವಾಸ ತೆಗೆದುಕೊಂಡಾಗ ಅದು ಪರಮಾತ್ಮನ ಜೊತೆ ಸಂಪರ್ಕ ಹೊಂದುತ್ತದೆ. ಕಷ್ಟ ಪಡುವುದು ಯೋಗವಲ್ಲ. ಸಹಜವಾಗಿ ಮಾಡುವುದೇ ಯೋಗ, ಟು ಲೀವ್ ವೆರಿ ಲೆಸ್ ಬದುಕು ಎಷ್ಟು ಸಣ್ಣದು ಮಾಡುತ್ತೇವೆಯೊ ಅದು ಸುಂದರವಾಗಿರುತ್ತದೆ. ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳುತ್ತಾರೆ ಅವರು ಸಾವಿನ ನಂತರ ಬದುಕುವವರು ಸಾಧಕರು ಎಂದು ಹೇಳುತ್ತಾರೆ. ಸ್ವಾಮಿಜಿಗಳು 500 ವರ್ಷ ಬದುಕಿದ್ದರು ಅಂದರೆ ಅವರ ವಿಚಾರಗಳು ಈಗಲು ಇವೆ. ಕಾಲ ಮಿತಿಯನ್ನು ಮೀರಿ ಸಾಧಿಸುವುದೇ ಯೋಗ ಎಂದು ಹೇಳಿದರು.
ಸಚಿವ ಸಂತೋಷ ಲಾಡ್ ಪಾದರಸದಂತೆ ಓಡಾಡುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲವಾಗಿ ನಿಂತು ಯೋಗ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ವಾಸ ಗುರು ವಚನಾನಂದಸ್ವಾಮಿ, ಸಚಿವ ಸಂತೋಷ ಲಾಡ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು