3:41 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಎಲ್ಲರಿಗಿಂತ ದೊಡ್ಡ ಯೋಗಿ ಶಿವ: ಯೋಗರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ

30/06/2025, 21:50

ಬೆಂಗಳೂರು(reporterkarnataka.com): ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.


ಅವರು ಶ್ವಾಸ ಯೋಗ ಸಂಸ್ಥೆ ಹಾಗೂ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಯೋಗ ರತ್ನ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಕ್ರೇನ್ ನ ಯೋಗಿನಿ ಒಲೈನಾ ತಾರಾಸೋವಾ ಅವರಿಗೆ ಪ್ರಶಸ್ತಿ ನೀಡಿ ಅವರು ಮಾತನಾಡಿದರು.
ಶ್ವಾಸ ಗುರು ವಚನಾನಂದ ಸ್ವಾಮೀಜಿ ಕರ್ನಾಟಕದಲ್ಲಿ ಯೋಗದ ದೊಡ್ಡ ಕ್ರಾಂತಿ ಮಾಡಿದ್ದಾರೆ. ಕೇವಲ ಯೋಗಿಗೆ ಸೀಮಿತವಾಗಿದ್ದ ಯೋಗವನ್ನು ಮನೆ ಮನೆಗೆ ತಲುಪಿಸುವ ಕೆಲಸ ವಚನಾನಂದ ಸ್ವಾಮಿಜಿ ಮಾಡಿದ್ದಾರೆ. ಯೋಗ ಜಗತ್ತಿನಲ್ಲಿ ಅವರ ದೊಡ್ಡ ಹೆಸರು ಇರುವುದರಿಂದ ಜಗತ್ತಿನ ಅವರ ಅಭಿಮಾನಿಗಳು ಬಂದಿದ್ದಾರೆ ಎಂದರು.
ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ. ನಾವು ಶ್ವಾಸ ತೆಗೆದುಕೊಂಡಾಗ ಅದು ಪರಮಾತ್ಮನ ಜೊತೆ ಸಂಪರ್ಕ ಹೊಂದುತ್ತದೆ. ಕಷ್ಟ ಪಡುವುದು ಯೋಗವಲ್ಲ. ಸಹಜವಾಗಿ ಮಾಡುವುದೇ ಯೋಗ, ಟು ಲೀವ್ ವೆರಿ ಲೆಸ್ ಬದುಕು ಎಷ್ಟು ಸಣ್ಣದು ಮಾಡುತ್ತೇವೆಯೊ ಅದು ಸುಂದರವಾಗಿರುತ್ತದೆ. ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳುತ್ತಾರೆ ಅವರು ಸಾವಿನ ನಂತರ ಬದುಕುವವರು ಸಾಧಕರು ಎಂದು ಹೇಳುತ್ತಾರೆ. ಸ್ವಾಮಿಜಿಗಳು 500 ವರ್ಷ ಬದುಕಿದ್ದರು ಅಂದರೆ ಅವರ ವಿಚಾರಗಳು ಈಗಲು ಇವೆ. ಕಾಲ ಮಿತಿಯನ್ನು ಮೀರಿ ಸಾಧಿಸುವುದೇ ಯೋಗ ಎಂದು ಹೇಳಿದರು.
ಸಚಿವ ಸಂತೋಷ ಲಾಡ್ ಪಾದರಸದಂತೆ ಓಡಾಡುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲವಾಗಿ ನಿಂತು ಯೋಗ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ವಾಸ ಗುರು ವಚನಾನಂದಸ್ವಾಮಿ, ಸಚಿವ ಸಂತೋಷ ಲಾಡ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು