1:12 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಶಿವಭಾಗ್ ವಾರ್ಡ್: ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

23/10/2022, 20:51

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥ ಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್ಲೆಡೆ ಅಭಿವೃದ್ಧಿ ಭರದಿಂದ ಸಾಗುತ್ತಿದೆ. ಮೂಲಭೂತ‌ ಸೌಕರ್ಯಗಳ ಜೊತೆಗೆ ಧಾರ್ಮಿಕ ಕ್ಷೇತ್ರಗಳ‌ ಅಭಿವೃದ್ಧಿಗೂ ಈ ಬಾರಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಒದಗಿಸಲಾಗಿದೆ. ಈಗ ಆಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪಲಿತಾಂಶ ಮುಂದಿನ ದಿನಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಶಾಸಕ‌ ಕಾಮತ್ ಹೇಳಿದರು.

ಕಾರ್ಪೊರೇಟರ್ ಕಾವ್ಯ ನಟರಾಜ್ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಪ್ರಮುಖರಾದ ನವೀನ್ ಶೆಣೈ, ರತ್ನಾಕರ್ ಶೆಣೈ ಯೋಗೀಶ್ ಶೆಣೈ, ನಾಗರಾಜ್, ವರುಣ್ ಅಂಬಟ್, ನರಸಿಂಹ ಹೆಗ್ಡೆ,ದಯಾನಂದ್ ರಾವ್, ಉಪೇಂದ್ರ ಭಟ್, ರಮೇಶ್ ಭಟ್, ಶರತ್, ವಾಸುದೇವ್ ಶೆಣೈ, ಸದಾಶಿವ ಆಚಾರ್ಯ,ಶ್ರೀನಿವಾಸ್ ಶೆಣೈ,ಜ್ಯೋತಿ ಶೆಣೈ, ಗಣೇಶ್ ಶೆಣೈ, ಅಶೋಕ್, ಹರೀಶ್ ಆಚಾರ್ಯ, ಗೀತಾ ಭಟ್, ಕುಸುಮ, ಶಿವಾನಂದ್, ಸುಗಂಧಿ,ವಿಜಯ್ ಜಯಶ್ರೀಗೇಟ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು