1:04 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ

02/11/2021, 11:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು.

ಮುಖಂಡ ಚಂದ್ರ ಭೂಪಲ್ ನಾಡಗೌಡ್ರು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲ ಮಠಾಧೀಶರುಗಳ ಹಾಗೂ ಜಂಗಮ ಸಮಾಜದ ಗುರುಹಿರಿಯರ ನಂತರ ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ, ವಿಧ ವಿಧದ ಭಜನೆ, ಬಾಜಿ, ಡೊಳ್ಳು, ಕಳಸ ಕನ್ನಡಿ ಒಂದಿಗೆ ಪ್ರಮುಖ ಬೀದಿಗಳಲ್ಲಿ ಶರಣರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಚಿಕ್ಕಮಗಳೂರಿನಿಂದ ಕಲಾ ಪುರೋಹಿತರನ್ನು ಕರಿಸಿ ನೋಡುಗರನ್ನು ಆಕರ್ಷಿಸುವಂತೆ ಕಾರ್ಯಕ್ರಮಗಳು ಜರುಗಿದವು. ಶರಣರ ಆಶೀರ್ವಾದದಿಂದ ಕಾರ್ಯಕ್ರಮಕ್ಕೆ ಆಯೋಜಿಸಿದ್ದ ಭಕ್ತರ ಪಾವನ ಎಂಬಂತೆ ಶರಣರ ಮಾರ್ಗದರ್ಶನ ಜೀವನದ ಅವಶ್ಯಕ ಎಂಬುವುದನ್ನು ನಾವು ಹರಿದು ಕೊಳ್ಳಬೇಕೆಂದು ಶರಣರು ಹೇಳಿದರು ಕಾರ್ಯಕ್ರಮದ ಪ್ರಮುಖ ಘಟ್ಟವಾದ ಜಂಗಮ ಸಮಾಜದ ಧರ್ಮೋಪದೇಶ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸತ್ಯಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಶಿವಶರಣರು, ಪುರೋಹಿತರು, ಬಸವರಾಜ್ ಬಾದರ್ಲಿ, ಶಿಕ್ಷಕ ವೈಜನಾಥ್, ಮಲ್ಲಯ್ಯ

ನವಲಿ, ವೀರೇಶ್ ರಾರವಿ, ಶಿವಕುಮಾರ್, ಗೀತಾ ಹಿರೇಮಠ, ಶಿವಲೀಲಾ ಹಿರೇಮಠ ಪುರೋಹಿತರು ಬಸವರಾಜ್ ಗೊರೆಬಾಳ್,ಅಭಿನವ ಗಿಣಿವಾರ, ಶಿವಯೋಗಿ ಮಸ್ಕಿಯ ಗಚ್ಚಿನ ಮಠದ ವರ ರುದ್ರಮುನಿ ಶಿವಾಚಾರ್ಯರು ತುರುವಿಹಾಳ, ಅಮರಗುಂಡ ದೇವರು ಅಭಿನವ ಸೋಮನಾಥ ಶಿವಾಚಾರ್ಯರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು