2:29 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ

02/11/2021, 11:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು.

ಮುಖಂಡ ಚಂದ್ರ ಭೂಪಲ್ ನಾಡಗೌಡ್ರು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲ ಮಠಾಧೀಶರುಗಳ ಹಾಗೂ ಜಂಗಮ ಸಮಾಜದ ಗುರುಹಿರಿಯರ ನಂತರ ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ, ವಿಧ ವಿಧದ ಭಜನೆ, ಬಾಜಿ, ಡೊಳ್ಳು, ಕಳಸ ಕನ್ನಡಿ ಒಂದಿಗೆ ಪ್ರಮುಖ ಬೀದಿಗಳಲ್ಲಿ ಶರಣರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಚಿಕ್ಕಮಗಳೂರಿನಿಂದ ಕಲಾ ಪುರೋಹಿತರನ್ನು ಕರಿಸಿ ನೋಡುಗರನ್ನು ಆಕರ್ಷಿಸುವಂತೆ ಕಾರ್ಯಕ್ರಮಗಳು ಜರುಗಿದವು. ಶರಣರ ಆಶೀರ್ವಾದದಿಂದ ಕಾರ್ಯಕ್ರಮಕ್ಕೆ ಆಯೋಜಿಸಿದ್ದ ಭಕ್ತರ ಪಾವನ ಎಂಬಂತೆ ಶರಣರ ಮಾರ್ಗದರ್ಶನ ಜೀವನದ ಅವಶ್ಯಕ ಎಂಬುವುದನ್ನು ನಾವು ಹರಿದು ಕೊಳ್ಳಬೇಕೆಂದು ಶರಣರು ಹೇಳಿದರು ಕಾರ್ಯಕ್ರಮದ ಪ್ರಮುಖ ಘಟ್ಟವಾದ ಜಂಗಮ ಸಮಾಜದ ಧರ್ಮೋಪದೇಶ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸತ್ಯಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಶಿವಶರಣರು, ಪುರೋಹಿತರು, ಬಸವರಾಜ್ ಬಾದರ್ಲಿ, ಶಿಕ್ಷಕ ವೈಜನಾಥ್, ಮಲ್ಲಯ್ಯ

ನವಲಿ, ವೀರೇಶ್ ರಾರವಿ, ಶಿವಕುಮಾರ್, ಗೀತಾ ಹಿರೇಮಠ, ಶಿವಲೀಲಾ ಹಿರೇಮಠ ಪುರೋಹಿತರು ಬಸವರಾಜ್ ಗೊರೆಬಾಳ್,ಅಭಿನವ ಗಿಣಿವಾರ, ಶಿವಯೋಗಿ ಮಸ್ಕಿಯ ಗಚ್ಚಿನ ಮಠದ ವರ ರುದ್ರಮುನಿ ಶಿವಾಚಾರ್ಯರು ತುರುವಿಹಾಳ, ಅಮರಗುಂಡ ದೇವರು ಅಭಿನವ ಸೋಮನಾಥ ಶಿವಾಚಾರ್ಯರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು