1:26 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಶಿವದೀಕ್ಷೆ ಸಂಸ್ಕಾರ ಶಿಬಿರ: 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷೆ

02/11/2021, 11:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಶಿವದೀಕ್ಷೆ ಸಂಸ್ಕಾರ ಶಿಬಿರದಲ್ಲಿ 151 ಜಂಗಮ ವಟುಗಳಿಗೆ ಸಾಮೂಹಿಕ ಅಯ್ಯಾಚಾರ ದೀಕ್ಷಾ ಕಾರ್ಯಕ್ರಮ ನಡೆಸಲಾಯಿತು.

ಮುಖಂಡ ಚಂದ್ರ ಭೂಪಲ್ ನಾಡಗೌಡ್ರು ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಎಲ್ಲ ಮಠಾಧೀಶರುಗಳ ಹಾಗೂ ಜಂಗಮ ಸಮಾಜದ ಗುರುಹಿರಿಯರ ನಂತರ ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಪ್ರಮುಖ ಬೀದಿಗಳಲ್ಲಿ ವಾದ್ಯಗೋಷ್ಠಿ, ವಿಧ ವಿಧದ ಭಜನೆ, ಬಾಜಿ, ಡೊಳ್ಳು, ಕಳಸ ಕನ್ನಡಿ ಒಂದಿಗೆ ಪ್ರಮುಖ ಬೀದಿಗಳಲ್ಲಿ ಶರಣರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಚಿಕ್ಕಮಗಳೂರಿನಿಂದ ಕಲಾ ಪುರೋಹಿತರನ್ನು ಕರಿಸಿ ನೋಡುಗರನ್ನು ಆಕರ್ಷಿಸುವಂತೆ ಕಾರ್ಯಕ್ರಮಗಳು ಜರುಗಿದವು. ಶರಣರ ಆಶೀರ್ವಾದದಿಂದ ಕಾರ್ಯಕ್ರಮಕ್ಕೆ ಆಯೋಜಿಸಿದ್ದ ಭಕ್ತರ ಪಾವನ ಎಂಬಂತೆ ಶರಣರ ಮಾರ್ಗದರ್ಶನ ಜೀವನದ ಅವಶ್ಯಕ ಎಂಬುವುದನ್ನು ನಾವು ಹರಿದು ಕೊಳ್ಳಬೇಕೆಂದು ಶರಣರು ಹೇಳಿದರು ಕಾರ್ಯಕ್ರಮದ ಪ್ರಮುಖ ಘಟ್ಟವಾದ ಜಂಗಮ ಸಮಾಜದ ಧರ್ಮೋಪದೇಶ ಜಾಗೃತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸತ್ಯಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಶಿವಶರಣರು, ಪುರೋಹಿತರು, ಬಸವರಾಜ್ ಬಾದರ್ಲಿ, ಶಿಕ್ಷಕ ವೈಜನಾಥ್, ಮಲ್ಲಯ್ಯ

ನವಲಿ, ವೀರೇಶ್ ರಾರವಿ, ಶಿವಕುಮಾರ್, ಗೀತಾ ಹಿರೇಮಠ, ಶಿವಲೀಲಾ ಹಿರೇಮಠ ಪುರೋಹಿತರು ಬಸವರಾಜ್ ಗೊರೆಬಾಳ್,ಅಭಿನವ ಗಿಣಿವಾರ, ಶಿವಯೋಗಿ ಮಸ್ಕಿಯ ಗಚ್ಚಿನ ಮಠದ ವರ ರುದ್ರಮುನಿ ಶಿವಾಚಾರ್ಯರು ತುರುವಿಹಾಳ, ಅಮರಗುಂಡ ದೇವರು ಅಭಿನವ ಸೋಮನಾಥ ಶಿವಾಚಾರ್ಯರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು