5:00 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಡೋಂಟ್ ವರಿ, ಮಂಗಳೂರಿಗೆ ಬರಲಿದೆ ಎಲ್‌ಪಿಜಿ ಹೊತ್ತ ‘ಶಿವಾಲಿಕ್‌’ ಹಡಗು: 26 ಸಾವಿರ ಟನ್‌ ಅಡುಗೆ ಅನಿಲ ಕಡಲನಗರಿಗೆ

17/03/2026, 14:02

ಮಂಗಳೂರು(reporterkarnataka.com):
ಪಶ್ಚಿಮ ಏಷ್ಯಾದ ಯುದ್ಧ ಪೀಡಿತ ಪ್ರದೇಶದಲ್ಲಿರುವ ಹೊರ್ಮುಜ್‌ ಜಲಸಂಧಿಯ ಮೂಲಕ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಸಾಗಿ ಬಂದಿದ್ದು,ಗುಜರಾತಿನ ಮುಂದ್ರಾ ಬಂದರನ್ನು ಸೋಮವಾರ ತಲುಪಿದೆ. ಆ ಹಡಗು ಭಾಗಶಃ ಎಲ್‌ಪಿಜಿಯನ್ನು ಮುಂದ್ರಾ ಬಂದರಿನಲ್ಲಿ ಇಳಿಸಿ, ಸುಮಾರು 26 ಸಾವಿರ ಟನ್‌ ಎಲ್‌ಪಿಜಿಯೊಂದಿಗೆ ಇಲ್ಲಿನ ನವಮಂಗಳೂರು ಬಂದರಿಗೆ ಬರಲಿದೆ.
‘ಶಿವಾಲಿಕ್ ಹಡಗು ಇಂಡಿಯನ್ ಆಯಿಲ್ ಕಾರ್ಪೊರೇಷನ್‌ಗೆ ಎಲ್‌ಪಿಜಿಯನ್ನು ಸಾಗಿಸುತ್ತಿದೆ. 46 ಸಾವಿರ ಟನ್‌ ಎಲ್‌ಪಿಜಿ ಹೊತ್ತ ಈ ಹಡಗು ಮುಂದ್ರ ಬಂದರಿನಲ್ಲಿ 20 ಸಾವಿರ ಟನ್‌ ಎಲ್‌ಪಿಜಿಯನ್ನು ಇಳಿಸಲಿದೆ. ಬಳಿಕ ನವಮಂಗಳೂರು ಬಂದರಿಗೆ ಪ್ರಯಾಣಿಸುವ ಹಡಗು 26 ಸಾವಿರ ಟನ್ ಎಲ್‌ಪಿಜಿಯನ್ನು ಇಲ್ಲಿ ಇಳಿಸಲಿದೆ’ ಎಂದು ಮೂಲಗಳು ತಿಳಿಸಿವೆ.
‘ಗುಜರಾತ್‌ನ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್‌ ಎಲ್‌ಪಿಜಿಯನ್ನು ಖಾಲಿ ಮಾಡಲು ಕನಿಷ್ಠ ಒಂದು ದಿನವಾದರೂ ಬೇಕು. ಅಲ್ಲಿಂದ ಹಡಗು ನವಮಂಗಳೂರು ಬಂದರನ್ನು ತಲುಪಲು ಮೂರು- ನಾಲ್ಕು ದಿನಗಳಾದರೂ ಬೇಕು’ ಎಂದು ನವಮಂಗಳೂರು ಬಂದರು ಪ್ರಾಧಿಕಾರದ ಮೂಲಗಳು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು