10:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಬರೋಲ್ಲ ಅಡುಗೆ ಅನಿಲ ಹೊತ್ತ ಶಿವಾಲಿಕ್ ಹಡಗು: ಗುಜರಾತಿನಲ್ಲೇ ಇಳಿಸಲಿದೆ ಎಲ್ ಪಿಜಿ

20/03/2026, 11:13

ಮಂಗಳೂರು(reporterkarnataka.com): ಪಶ್ಚಿಮ ಏಷ್ಯಾದ ಯುದ್ಧ ಪೀಡಿತ ಪ್ರದೇಶದಲ್ಲಿರುವ ಹೊರ್ಮುಜ್‌ ಜಲಸಂಧಿಯ ಮೂಲಕ ಸಾಗಿ ಗುಜರಾತಿನ ಮುಂದ್ರಾ ಬಂದರನ್ನು ಸೋಮವಾರ ತಲುಪಿದ್ದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಹೊತ್ತ ಶಿವಾಲಿಕ್‌ ಹಡಗು ನವಮಂಗಳೂರು ಬಂದರಿಗೆ ಬರುತ್ತಿಲ್ಲ.
ಶಿವಾಲಿಕ್ ಹಡಗಿನಲ್ಲಿದ್ದ ಎಲ್‌ಪಿಜಿಯಲ್ಲಿ ಸುಮಾರು 20 ಸಾವಿರ ಟನ್‌ ಅನ್ನು ಮುಂದ್ರಾ ಬಂದರಿನಲ್ಲಿ ಇಳಿಸಿ, ಸುಮಾರು 26 ಸಾವಿರ ಟನ್‌ ಎಲ್‌ಪಿಜಿಯೊಂದಿಗೆ ಇಲ್ಲಿನ ನವಮಂಗಳೂರು ಬಂದರಿಗೆ ಬುಧವಾರ ಬರಲಿದೆ ಎಂಬ ಮಾಹಿತಿ ಇತ್ತು. ಆದರೆ ಆ ಹಡಗು ಇಲ್ಲಿಗೆ ಬರುತ್ತಿಲ್ಲ’ ಎಂದು ನವಮಂಗಳೂರು ಬಂದರಿನ ಮೂಲಗಳು ತಿಳಿಸಿವೆ.
‘ಶಿವಾಲಿಕ್ ಹಡಗಿನಲ್ಲಿದ್ದ ಭಾಗಶಃ ಎಲ್‌ಪಿಜಿಯನ್ನು ಮುಂದ್ರಾ ಬಂದರಿನಲ್ಲಿ ಇಳಿಸಲಾಗಿದೆ. ಇನ್ನುಳಿದ ಎಲ್‌ಪಿಜಿ ಅನ್ನು ಗುಜರಾತಿನ ದಹೇಜ್ ಟರ್ಮಿನಲ್‌ನಲ್ಲಿ ಇಳಿಸಲಾಗುತ್ತಿದೆ’ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಚ್‌ಪಿಸಿಎಲ್‌ ಸಂಸ್ಥೆಗೆ ಎಲ್‌ಪಿಜಿ ಪೂರೈಸುವ ಹಡಗೊಂದು ಇದೇ 20ರ ನಂತರ ನವ ಮಂಗಳೂರು ಬಂದರು ತಲುಪುವ ನಿರೀಕ್ಷೆ ಇದೆ.

‘ನಮ್ಮ ಸಂಸ್ಥೆಗೆ ಎಲ್‌ಪಿಜಿ ಪೂರೈಸುವ ಹಡಗು ಮಂಗಳೂರು ಕಡೆಗೆ ಪ್ರಯಾಣ ಬೆಳೆಸುತ್ತಿದೆ. ಹಡಗಿನಲ್ಲಿರುವ ಒಟ್ಟು ಎಲ್‌ಪಿಜಿಯಲ್ಲಿ ಇಲ್ಲಿ ಎಷ್ಟನ್ನು ಇಳಿಸಲಾಗುತ್ತದೆ ಎಂಬ ಖಚಿತ ಮಾಹಿತಿ ಇಲ್ಲ’ ಎಂದು ಎಚ್‌ಪಿಸಿಎಲ್ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು