5:51 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನದ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

27/10/2024, 22:35

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್ ಹಾಗೂ ಸೀಲ್ ಬಳಸಿ ವಂಚನೆ ಮಾಡಿದ ಪ್ರಕರಣ ಕುರಿತು ಕೇಸ್ ದಾಖಲಿಸಲಾಗಿದೆ.
ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಸ್ಕರ ಭಟ್ ಬಿ. ಮಂಗಳಾದೇವಿ ಎಂಬವರು ತಾವೇ ಕಾರ್ಯದರ್ಶಿ ಎಂದು ಹೇಳಿಕೊಂಡು ಸಂಘದ ನಕಲಿ ಕಾಗದ ಪತ್ರ ತಯಾರಿಸಿ ಲೆಟರ್ ಹೆಡ್ ಮತ್ತು ಸೀಲ್ ಬಳಸಿ ಮೋಸ ವಂಚನೆ ಮಾಡಿದ್ದಾರೆ ಎಂದು ಶಿವಳ್ಳಿ ಸ್ಪಂದನ ಕಾರ್ಯದರ್ಶಿ ಕದ್ರಿಯ ಕೆ. ಕೃಷ್ಣ ಭಟ್ ದೂರು ನೀಡಿದ್ದರು.

ಡಿಆರ್ ರಿಜಿಸ್ಡ್ರಾರ್ ಕಚೇರಿಗೆ ಸಂಘದ ನವೀಕರಣ ಮಾಡಲು ಹೋದಾಗ ಅಲ್ಲಿ ಭಾಸ್ಕರ ಭಟ್ ಬೇರೆಯೇ ಪದಾಧಿಕಾರಿಗಳ ಪಟ್ಟಿ ನೀಡಿ ಅರ್ಜಿ ಸಲ್ಲಿಸಿದ್ದರು.
ಅಲ್ಲಿಂದ ಸ್ವೀಕೃತಿ ಪತ್ರ ಬರೆದು ಇತರ ನಕಲಿ ಕಾಗದ ಪತ್ರಗಳನ್ನು ಕರ್ನಾಟಕ ಬ್ಯಾಂಕಿಗೆ ನೀಡಿ ಅಲ್ಲಿಯೂ ಅವರ ಹೆಸರಿನ ಜತೆ ಉದಯಶಂಕರ ಭಟ್, ಗಿರೀಶ್ ಎಂಬವರ ಹೆಸರನ್ನು ಬ್ಯಾಂಕ್ ಖಾತೆಯಲ್ಲಿ ನೋಂದಣಿ ಮಾಡಿದ್ದರು. ಖಾತೆಯಲ್ಲಿರುವ ಹಣವನ್ನು ಲಪಟಾಯಿಸಲು ಈ ಕೃತ್ಯ ನಡೆಸಿದ್ದರು ಎಂದು ಕಾರ್ಯದರ್ಶಿ ಕೃಷ್ಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು