6:10 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಶಿವಳ್ಳಿ ಸ್ಪಂದನದ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

27/10/2024, 22:35

ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್ ಹಾಗೂ ಸೀಲ್ ಬಳಸಿ ವಂಚನೆ ಮಾಡಿದ ಪ್ರಕರಣ ಕುರಿತು ಕೇಸ್ ದಾಖಲಿಸಲಾಗಿದೆ.
ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಸ್ಕರ ಭಟ್ ಬಿ. ಮಂಗಳಾದೇವಿ ಎಂಬವರು ತಾವೇ ಕಾರ್ಯದರ್ಶಿ ಎಂದು ಹೇಳಿಕೊಂಡು ಸಂಘದ ನಕಲಿ ಕಾಗದ ಪತ್ರ ತಯಾರಿಸಿ ಲೆಟರ್ ಹೆಡ್ ಮತ್ತು ಸೀಲ್ ಬಳಸಿ ಮೋಸ ವಂಚನೆ ಮಾಡಿದ್ದಾರೆ ಎಂದು ಶಿವಳ್ಳಿ ಸ್ಪಂದನ ಕಾರ್ಯದರ್ಶಿ ಕದ್ರಿಯ ಕೆ. ಕೃಷ್ಣ ಭಟ್ ದೂರು ನೀಡಿದ್ದರು.

ಡಿಆರ್ ರಿಜಿಸ್ಡ್ರಾರ್ ಕಚೇರಿಗೆ ಸಂಘದ ನವೀಕರಣ ಮಾಡಲು ಹೋದಾಗ ಅಲ್ಲಿ ಭಾಸ್ಕರ ಭಟ್ ಬೇರೆಯೇ ಪದಾಧಿಕಾರಿಗಳ ಪಟ್ಟಿ ನೀಡಿ ಅರ್ಜಿ ಸಲ್ಲಿಸಿದ್ದರು.
ಅಲ್ಲಿಂದ ಸ್ವೀಕೃತಿ ಪತ್ರ ಬರೆದು ಇತರ ನಕಲಿ ಕಾಗದ ಪತ್ರಗಳನ್ನು ಕರ್ನಾಟಕ ಬ್ಯಾಂಕಿಗೆ ನೀಡಿ ಅಲ್ಲಿಯೂ ಅವರ ಹೆಸರಿನ ಜತೆ ಉದಯಶಂಕರ ಭಟ್, ಗಿರೀಶ್ ಎಂಬವರ ಹೆಸರನ್ನು ಬ್ಯಾಂಕ್ ಖಾತೆಯಲ್ಲಿ ನೋಂದಣಿ ಮಾಡಿದ್ದರು. ಖಾತೆಯಲ್ಲಿರುವ ಹಣವನ್ನು ಲಪಟಾಯಿಸಲು ಈ ಕೃತ್ಯ ನಡೆಸಿದ್ದರು ಎಂದು ಕಾರ್ಯದರ್ಶಿ ಕೃಷ್ಣ ಭಟ್ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು