8:40 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

13/11/2025, 15:43

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವ್ಯಕ್ತಿಯೊರ್ವ ಏಕಾಏಕಿ ರಸ್ತೆಗೆ ಬಂದ ಕಾರಣ ಲಾರಿಯ ಚಕ್ರಕ್ಕೆ ಸಿಲುಕಿ ಎರಡು ಕಾಲು ಕಟ್ ಆಗಿರುವ ಘಟನೆ ತಳುವೆ ಸಮೀಪ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಕೊಪ್ಪ ತೀರ್ಥಹಳ್ಳಿ ನಡುವಿನ ತಳುವೆ ಬಳಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಕಾಲು ಕಟ್ ಆಗಿದೆ. ಆದರೆ, ಈ ಅಪಘಾತಕ್ಕೆ ಆ ವ್ಯಕ್ತಿಯೇ ಕಾರಣ ಎಂಬ ಮಾತು ಸ್ಥಳೀಯರಿಂದ ಕೇಳಿ ಬರುತ್ತಿದೆ. ಬುಧವಾರ ಬೆಳಗ್ಗೆಯಿಂದ ರಸ್ತೆಯಲ್ಲಿ ಓಡಾಡುವ ಬಸ್ ಹಾಗೂ ಕಾರುಗಳಿಗೆ ಅಡ್ಡ ಹೋಗುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಖಾಸಗಿ ಬಸ್ ವೊಂದಕ್ಕೆ ಅಡ್ಡ ಹೋಗಿದ್ದಾನೆ ಬಸ್ ನಿಧಾನವಾಗಿ ಬರುತ್ತಿದ್ದ ಕಾರಣ ಬ್ರೇಕ್ ಹಾಕಲಾಗಿದೆ. ನಂತರ ಬಸ್ ಡ್ರೈವರ್ ಈತನಿಗೆ ಬೈದು ಬುದ್ಧಿವಾದ ಹೇಳಿ ಹೋಗಿದ್ದರು ಎಂದು ತಿಳಿದುಬಂದಿದೆ.
ಆದರೂ ಸಂಜೆ ಲಾರಿ ಬರುತ್ತಿದ್ದದ್ದನ್ನು ನೋಡಿ ಏಕಾಏಕಿ ರಸ್ತೆಗೆ ಹಾರಿದ್ದಾನೆ. ಈ ವೇಳೆ ಲಾರಿ ಚಾಲಕ ಎಷ್ಟೇ ತಪ್ಪಿಸಿದರು ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಕಾಲು ಕಟ್ ಮಾಡಿಕೊಂಡಿದ್ದಾನೆ.
ಈ ಪ್ರಕರಣ ವಿಚಿತ್ರವಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು