4:00 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

20/03/2026, 12:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ವಾಸವಿರುವ ಮೊಹಮ್ಮದ್ ಎಂಬುವವರ ಮಗ ಅನ್ಸಾರ್ ( 34) ಎಂದು ಗುರುತಿಸಲಾಗಿದ್ದು, ಆತ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.
ಮಾಹಿತಿಯ ಪ್ರಕಾರ, ಯುಗಾದಿ ಹಬ್ಬದ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯೂ ಸ್ಪೆಷಲ್ ಕ್ಲಾಸ್ ಗೆ ತೆರಳಲೆಂದು ನೆಲ್ಯಹುದಿಕೇರಿಯಲ್ಲಿ ನಿಂತಿದ್ದ ಸಂದರ್ಭ ಆಚೆಗೆ ಬಂದ ಆಟೋ ಚಾಲಕ ತಾನು ಶಾಲೆ ಕಡೆಗೆ ತೆರಳುವುದಾಗಿ ಹೇಳಿದ ಮೇರೆಗೆ ಬಾಲಕಿ ಆಟೋ ಹತ್ತಿದ್ದಾಳೆ. ಬಳಿಕ ಸಿದ್ದಾಪುರದಲ್ಲಿರುವ ತನ್ನ ಶಾಲೆ ತಲುಪುತ್ತಿದ್ದಂತೆ ನಿಲ್ಲಿಸುವಂತೆ ಚಾಲಕನಿಗೆ ಹೇಳಿದರು ಆತ ಅಲ್ಲಿ ನಿಲ್ಲಿಸದೆ ಅಮ್ಮತ್ತಿ ಕಡೆಗೆ ವೇಗವಾಗಿ ಆಟೋ ಚಲಾಯಿಸಿ ಅಲ್ಲಿಂದ ಪಾಲಿಬೆಟ್ಟ ಮಾರ್ಗದಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಆಟೋ ನಿಲ್ಲಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂದರ್ಭ ಬಾಲಕಿ ಕಿರುಚಿದ್ದು, ಹೆದರಿದ ಚಾಲಕ ಆಕೆಯ ಬಳಿ ಕಿರುಚಬೇಡ ಎಂದು ಹೇಳಿ ಮತ್ತೆ ಸಿದ್ದಾಪುರಕ್ಕೆ ಕರೆತಂದು ಬಿಟ್ಟಿದ್ದಾನೆ ಎಂದು ಬಾಲಕಿ ತನ್ನ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿ, ಆಟೋವನ್ನು ವಶಕ್ಕೆ ಪಡೆದುಕೊಂಡಿರುವ ಸಿದ್ದಾಪುರ ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು