1:30 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

20/03/2026, 12:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ವಾಸವಿರುವ ಮೊಹಮ್ಮದ್ ಎಂಬುವವರ ಮಗ ಅನ್ಸಾರ್ ( 34) ಎಂದು ಗುರುತಿಸಲಾಗಿದ್ದು, ಆತ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.
ಮಾಹಿತಿಯ ಪ್ರಕಾರ, ಯುಗಾದಿ ಹಬ್ಬದ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯೂ ಸ್ಪೆಷಲ್ ಕ್ಲಾಸ್ ಗೆ ತೆರಳಲೆಂದು ನೆಲ್ಯಹುದಿಕೇರಿಯಲ್ಲಿ ನಿಂತಿದ್ದ ಸಂದರ್ಭ ಆಚೆಗೆ ಬಂದ ಆಟೋ ಚಾಲಕ ತಾನು ಶಾಲೆ ಕಡೆಗೆ ತೆರಳುವುದಾಗಿ ಹೇಳಿದ ಮೇರೆಗೆ ಬಾಲಕಿ ಆಟೋ ಹತ್ತಿದ್ದಾಳೆ. ಬಳಿಕ ಸಿದ್ದಾಪುರದಲ್ಲಿರುವ ತನ್ನ ಶಾಲೆ ತಲುಪುತ್ತಿದ್ದಂತೆ ನಿಲ್ಲಿಸುವಂತೆ ಚಾಲಕನಿಗೆ ಹೇಳಿದರು ಆತ ಅಲ್ಲಿ ನಿಲ್ಲಿಸದೆ ಅಮ್ಮತ್ತಿ ಕಡೆಗೆ ವೇಗವಾಗಿ ಆಟೋ ಚಲಾಯಿಸಿ ಅಲ್ಲಿಂದ ಪಾಲಿಬೆಟ್ಟ ಮಾರ್ಗದಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಆಟೋ ನಿಲ್ಲಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂದರ್ಭ ಬಾಲಕಿ ಕಿರುಚಿದ್ದು, ಹೆದರಿದ ಚಾಲಕ ಆಕೆಯ ಬಳಿ ಕಿರುಚಬೇಡ ಎಂದು ಹೇಳಿ ಮತ್ತೆ ಸಿದ್ದಾಪುರಕ್ಕೆ ಕರೆತಂದು ಬಿಟ್ಟಿದ್ದಾನೆ ಎಂದು ಬಾಲಕಿ ತನ್ನ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿ, ಆಟೋವನ್ನು ವಶಕ್ಕೆ ಪಡೆದುಕೊಂಡಿರುವ ಸಿದ್ದಾಪುರ ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು