11:40 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಶಿವಮೊಗ್ಗದ ಕೇಂದ್ರ ಕಾರಾಗೃಹ: ಬೀಡಿಗಾಗಿ ಜೈಲಿನ 778 ಖೈದಿಗಳ ಪ್ರತಿಭಟನೆ; ಮನವೊಲಿಕೆಗೆ ಅಧಿಕಾರಿಗಳ ಯತ್ನ

02/09/2024, 17:29

ಶಿವು ರಾಠೋಡ ಹುಣಸಗಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ. ಜೈಲಿನ 778 ಕೈದಿಗಳು ಇಂದು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆ ನಡೆಸಿದ್ದಾರೆ.
ಕಾರಾಗೃಹ ಇಲಾಖೆಯ ಬಿಗಿ ಕ್ರಮದಿಂದ ಜೈಲಿನಲ್ಲಿ ಬಿಡಿಯು ಸಹ ಸಿಗುತ್ತಿಲ್ಲ. ಆದರೆ ಬೀಡಿ ಸಿಗರೇಟಿನ ಚಟಕ್ಕೆ ಅಡಿಕ್ಟ್ ಆಗಿರುವ ಕೈದಿಗಳು ಅದರಿಂದ ಬಿಡಿಸಿಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ.
ಇದೇ ಕಾರಣಕ್ಕೆ ಇಂದು ಒಗ್ಗಟ್ಟಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಜೈಲಿನಲ್ಲಿ ಬೆಳಗಿನ ಉಪಾಹಾರವನ್ನು ತ್ಯಜಿಸಿರುವ ಕೈದಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರ ಮನವೊಲಿಸುವ ಸಲುವಾಗಿ ಕಾರಾಗೃಹ ಇಲಾಖೆಯ ಅಧಿಕಾರಿಗಳ ತಂಡ ಪ್ರಯತ್ನ ನಡೆಸುತ್ತಿದೆ. ಆದಾಗ್ಯು ಅಧಿಕಾರಿಗಳ ಮಾತಿಗೆ ಕೈದಿಗಳು ಸುಮ್ಮನಾಗುತ್ತಿಲ್ಲ. ಬೇಕೆಬೇಕು ಬೀಡಿಯಾದರೂ ಬೇಕು ಎಂದು ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇತ್ತೀಚೆಗೆಷ್ಟೆ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದ 100ಕ್ಕೂ ಹೆಚ್ಚು ಪೊಲೀಸರ ತಂಡ ರೇಡ್ ನಡೆಸಿತ್ತು. ಈ ವೇಳೆ ಮ್ಯಾಚ್ ಬಾಕ್ಸ್ ಹಾಗೂ ಬೀಡಿಯ ಬಂಡಲ್ ಮತ್ತು ಚಾರ್ಜರ್ ವಯರ್ ಸಿಕ್ಕಿತ್ತು. ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಹ ದಾಖಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್‌ನ ಇಬ್ಬರು ಆರೋಪಿಗಳು ಇನ್ ಆಗಿದ್ದರು. ಆನಂತರ ಜೈಲಿನಲ್ಲಿ ಇನ್ನಷ್ಟು ಬಂದೋಬಸ್ತ್ ಮಾಡಲಾಗಿತ್ತು. ಇವೆಲ್ಲದರ ಪರಿಣಾಮವಾಗಿ ಕೈದಿಗಳಿಗೆ ಬೀಡಿ ಸಿಗದಂತಾಗಿದೆ. ಇದರಿಂದ ಸಿಟ್ಟಿಗೆದ್ದಿರುವ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು