10:51 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು