5:27 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು