1:54 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು